More

    ಉದಯನಿಧಿ ಸ್ಟಾಲಿನ್​ಗೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತರಾಟೆ

    ಮೈಸೂರು: ಧರ್ಮದ ಬಗ್ಗೆ ತಿಳಿದುಕೊಂಡವರು ಮಾತನಾಡುವುದಿಲ್ಲ. ತಿಳಿದುಕೊಳ್ಳದವನು ತಮ್ಮ ಧರ್ಮದ ಬಗ್ಗೆ, ಇತರೆ ಧರ್ಮಗಳ ಬಗ್ಗೆಯೂ ಮಾತನಾಡುತ್ತಾನೆ ಎಂದು ಆದಿಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಉದಯನಿಧಿ ಸ್ಟಾಲಿನ್​ಗೆ ಹಿಗ್ಗಾಮುಗ್ಗ ತರಾಟೆ ತೆಗೆದುಕೊಂಡರು.

    ನಾಡಾಳುವ ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಮಾತನಾಡಿದ ಸ್ವಾಮೀಜಿಯವರು, ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ…! ಮಹಾಭಾರತದ ಸಂದೇಶ ಉಲ್ಲೇಖಿಸಿ ಟಾಂಗ್ ಕೊಟ್ಟರು.

    ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜಾಗೃತವಾಗಿ ಮಾತನಾಡಬೇಕು. ಬಳಸುವ ಪದಗಳ ಬಗ್ಗೆ ನಿಗಾ ಇರಬೇಕು ಎಂದು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

    ಹಿಂದೂ ಧರ್ಮದ ಪರ ಹೋರಾಟದ ಸುಳಿವು ನೀಡಿದ ಸ್ವಾಮೀಜಿಯವರು, ಇದೇ ವಿಚಾರಕ್ಕೆ ಪ್ರತ್ಯೇಕವಾಗಿ ಸಭೆ ಕರೆಯುವ ಅನಿವಾರ್ಯತೆ ಬರಬಹುದು. ಬಂದಾಗ ಅದನ್ನು ಮುಖ್ಯವಾಗಿ ಚರ್ಚಿಸೋಣ ಎಂದರು. ಆದರೆ ಮುಂತಾದಾಳತ್ವದ ಬಗ್ಗೆ ಕೇಳಿದ ಪ್ರಶ್ನೆಗೆ ಮೌನವಹಿಸಿದರು.

    ಭಾರತ ಮರುನಾಮಕರಣ ಚರ್ಚೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು, ಇಂಗ್ಲಿಷ್​ನಲ್ಲಿ ಇಂಡಿಯಾ, ಹಿಂದಿಯಲ್ಲಿ ಭಾರತ ಅಂತ ಬಳಸುತ್ತಿದ್ದೇವೆ. ಈ ಚರ್ಚೆ ಯಾವಾಗ, ಹೇಗೆ ಶುರುವಾಯ್ತು ಗೊತ್ತಿಲ್ಲ. ಹಿಂದಿ, ಕನ್ನಡದಲ್ಲಿ ಬರೆಯುವಾಗ ಭಾರತ ಸರ್ಕಾರ ಎಂದೇ ಬರೆಯುತ್ತೇವೆ. ಕೆಲವೊಮ್ಮೆ ಇಂಡಿಯನ್​ ಗವರ್ನಮೆಂಟ್ ಎಂದು ಬಳಸುತ್ತೇವೆ. ಕೇಂದ್ರ ಸರ್ಕಾರವೇ ಮರುನಾಮಕರಣ ಚರ್ಚೆ ನಮ್ಮ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ವಿಚಾರದಲ್ಲಿ ಚರ್ಚೆ ಅನಗತ್ಯ ಎಂಬುದು ನನ್ನ ಅಭಿಪ್ರಾಯ ಎಂದು ಮೈಸೂರಿನಲ್ಲಿ ಚುಂಚಶ್ರೀ ಹೇಳಿಕೆ ನೀಡಿದರು.

    ಚಿಕ್ಕಮಗಳೂರಲ್ಲಿ ಕಾರು ಅಪಘಾತ ಪ್ರಕರಣ; ‘ಪೊಲೀಸರು ಹೇಳಿದಂತೆ ಕೇಳುವೆ…’ ಎಂದ ಚಂದ್ರಪ್ರಭ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts