More

    ಫ.ಗು.ಹಳಕಟ್ಟಿ ಜಯಂತಿ ಜು.೨ರಂದು

    ಕಲಬುರಗಿ: ವಚನ ಪಿತಾಮಹ ಡಾ.ಫ.ಗು.ಹಳಕಟ್ಟಿಯವರ ೧೪೫ನೇ ಜನ್ಮದಿನವನ್ನು ನಗರದಲ್ಲಿ ಜು.೨ರಂದು ಅದ್ದೂರಿ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಯಂತ್ಯುತ್ಸವ ಸಮಿತಿ ಕಾರ್ಯಾಧ್ಯಕ್ಷ ಆರ್.ಜಿ.ಶೆಟಗಾರ ತಿಳಿಸಿದರು.

    ಜು.೨ರಂದು ಬೆಳಗ್ಗೆ ೧೧.೩೦ಕ್ಕೆ ನಗರದ ಡಾ.ಎಸ್.ಎಂ.ಪAಡಿತ ರಂಗಮAದಿರದಲ್ಲಿ `ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ’ಯ ತೃತೀಯ ವಾರ್ಷಿಕೋತ್ಸವ ನಡೆಯಲಿದೆ. ಅದಕ್ಕಿಂತ ಮುನ್ನ ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತದಿಂದ ರಂಗಮAದಿರದವರೆಗೆ ಬೆಳಗ್ಗೆ ೯ಗಂಟೆಗೆ ಹಳಕಟ್ಟಿ ಅವರ ಭಾವಚಿತ್ರ, ವಿವಿಧ ಕಲಾತಂಡಗಳೊAದಿಗೆ ಅದ್ದೂರಿ ಮೆರವಣಿಗೆ ನಡೆಸಲಾಗುವುದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

    ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಗೌರವ ಉಪಸ್ಥಿತಿ ಇರಲಿದ್ದಾರೆ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಾಹಿತಿಗಳು, ಚಿಂತಕರು, ಬಸವಾಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಚಿಂತಕಿ ಮೀನಾಕ್ಷಿ ಬಾಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಶರಣಪ್ಪ ನಾಗಪ್ಪ ಜೆನವೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು. ಜಿಲ್ಲೆಯ ಎಲ್ಲ ಕಾಯಕ ಶರಣರ ಸಂಘಟನೆಗಳು ಸಹಯೋಗದಲ್ಲಿ ಅದ್ದೂರಿ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

    ಗೌರವಾಧ್ಯಕ್ಷ ರವೀಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ವಿನೋದಕುಮಾರ ಜೇನವೇರಿ, ಪ್ರಧಾನ ಸಂಚಾಲಕ ಶಿವಲಿಂಗಪ್ಪ ಅಷ್ಟಗಿ, ಸಂಗಮೇಶ ಗುಬ್ಬೆವಾಡ, ಹಣಮಂತರಾವ ಪಾಟೀಲ್, ಅಯ್ಯಣ್ಣ, ಶಿವರಾಜ ಅಂಡಗಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts