More

    ಪ್ರಜ್ವಲ್ ಪ್ರಕರಣದ ಆರೋಪಿಗೆ ಜಾಮೀನು : ತಂದೆಯ ಅಪರಕರ್ಮದಲ್ಲಿ ಭಾಗಿಯಾಗಲು ಅವಕಾಶ

    ಬೆಂಗಳೂರು: ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಗಾಗಿರುವ ಆರನೇ ಆರೋಪಿ ಎಚ್.ಟಿ.ಕೀರ್ತಿಗೆ ತಂದೆಯ ಮರಣೋತ್ತರ ವಿಧಿ-ವಿಧಾನಗಳನ್ನು ನೆರವೇರಿಸಲು (ಅಪರಕರ್ಮ) ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

    ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಕೃಷ್ಣ ದೀಕ್ಷಿತ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

    ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಕೀರ್ತಿ ಅವರ ತಂದೆ ಜೂ.24 ರಂದು ನಿಧನ ಹೊಂದಿದ್ದಾರೆ. ಅರ್ಜಿದಾರರು ಮೃತರಿಗೆ ಏಕ ಮಾತ್ರ ಪುತ್ರರಾಗಿದ್ದು, ತಂದೆಯ ಮರಣದ ನಂತರ 11 ದಿನಗಳ ವರೆಗೂ ಧಾರ್ಮಿಕ ವಿಧಿ-ವಿಧಾನಗಳನ್ನು ನೇರವೇರಿಸಬೇಕಿದೆ. ಹಾಗಾಗಿ 15 ದಿನ ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕು ಎಂದು ನ್ಯಾಯಪೀಠವನ್ನು ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ, ಜು.15ರವೆಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿ ಆದೇಶಿಸಿತು.

    ಅರ್ಜಿದಾರರನ್ನು ಈ ಕೂಡಲೇ ಜೈಲಿನಿಂದ ಬಿಡುಗಡೆಗೊಳಿಸಬೇಕು. ಆರೋಪಿಯು 50 ಸಾವಿರ ಮೊತ್ತದ ವೈಯಕ್ತಿಕ ಬಾಂಡ್ ಮತ್ತು ಅಷ್ಟೇ ಮೊತ್ತಕ್ಕೆ ಇಬ್ಬರ ಶ್ಯೂರಿಟಿ ನೀಡಬೇಕು. ಮೈಸೂರು ಜಿಲ್ಲೆಯ ಕೆ.ಆರ್. ನಗರದ ಹೊರತಾಗಿ ಬೇರೆ ಕಡೆಗಳಲ್ಲಿ ಪ್ರವಾಸ ಬೆಳೆಸಬಾರದು. ಜು.15ಕ್ಕೆ ಪೊಲೀಸ್ ಠಾಣೆಗೆ ಹೋಗಿ ಶರಣಾಗಬೇಕು ಎಂದು ಹೇಳಿ ವಿಚಾರಣೆ ಮುಂದೂಡಿತು.

    ರಾಜ್ಯ ಸರ್ಕಾರಕ್ಕೆ ನೋಟಿಸ್…

    ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಅಪಹರಿಸಲು ಸಹಕಾರ ನೀಡಿದ ಆರೋಪದಡಿ ಬಂಧನಕ್ಕೊಳಾಗಿರುವ ಇತರ ಆರೋಪಿಗಳು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts