ನವದೆಹಲಿ: ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಮಾತಾ ವೈಷ್ಣೋದೇವಿ ದರ್ಶನಕ್ಕೆ ಜಮ್ಮುವಿನಿಂದ ನೇರ ಹೆಲಿಕಾಪ್ಟರ್ ಸೇವೆ ಆರಂಭ
ರಾಹುಲ್ ಗಾಂಧಿ ಅವರು ವಯನಾಡ್ ಮತ್ತು ರಾಯ್ಬರೇಲಿ ಎರಡು ಕ್ಷೇತ್ರಗಳಿಂದಲೂ ಆಯ್ಕೆಯಾಗಿದ್ದರು. ಈಗ ಅವರ ಸಹೋದರಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧಿಸಲು ವಯನಾಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ.
ಅವರು ಹೌಸ್ ಆಫ್ ಪೀಪಲ್ನ ಸದಸ್ಯರಾಗಿ ಚುನಾಯಿತರಾದ ನಂತರ, ಕಾನೂನಿನ ಮೂಲಕ ಸ್ಥಾಪಿಸಲ್ಪಟ್ಟಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದಿದ್ದೇನೆ, ನಾನು ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ ಎಂದು ದೃಢವಾಗಿ ದೃಢಪಡಿಸುತ್ತೇನೆ ಮತ್ತು ನಾನು ಜೈ ಹಿಂದ್, ಜೈ ಸಂವಿಧಾನ್ ಪ್ರವೇಶಿಸಲಿರುವ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ಶ್ರೀ ಗಾಂಧಿಯವರು ಪ್ರಮಾಣ ವಚನ ಸ್ವೀಕರಿಸಿದರು.
ತಮ್ಮ ಹೆಸರನ್ನು ಪೂರ್ತಿಯಾಗಿ ರಾಹುಲ್ ಗಾಂಧಿ ಅಂತ ಹೇಳುವ ಮೂಲಕ, ನಾನು ಲೋಕಸಭಾ ಸದಸ್ಯನಾಗಿ ಚುನಾಯಿತನಾಗಿ, ಕಾನೂನು ಮೂಲಕ ಸ್ಥಾಪಿಸಲ್ಪಟ್ಟಿರುವ ಭಾರತದ ಸಂವಿಧಾನಕ್ಕೆ ಸತ್ಯ, ಶ್ರದ್ಧೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದು, ಭಾರತದ ಸಾರ್ವಭೌಮತೆ ಮತ್ತು ಅಖಂಡತೆಯನ್ನು ಎತ್ತಿಹಿಡಿಯುವೆನೆಂದು ಮತ್ತು ಕೈಗೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆನೆಂದು ಪ್ರಮಾಣ ವಚನ ಸ್ವೀಕರಿಸಿದರು.
ಇಂಡಿಯಾ ಬಣದ ಸಂಸದರು ಸೋಮವಾರ ಸಂಸತ್ತಿನ ಅಧಿವೇಶದಲ್ಲಿ ಸಂವಿಧಾನದ ಕಿರುಪುಸ್ತಕ ಪ್ರದರ್ಶಿಸಿದರು. ಪಕ್ಷದ ಹಲವಾರು ಸಂಸದರು ಈ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದರು. ಸಂವಿಧಾನ ಕೈಪಿಡಿ ಹಿಡಿದು ರಾಹುಲ್ ಗಾಂಧಿ, ಸಂವಿಧಾನದ ಮೇಲೆ ದಾಳಿ ಮಾಡಲು ಪ್ರತಿಪಕ್ಷಗಳು ಸರ್ಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು.
ತುರ್ತು ಪರಿಸ್ಥಿತಿ ಘೋಷಿಸಿ ಇಂದಿಗೆ 50 ವರ್ಷ ತುಂಬಿದ್ದು, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ‘ತುರ್ತು ಪರಿಸ್ಥಿತಿಯನ್ನು ಹೇರಲು ಕಾರಣವಾದ ಮನಸ್ಥಿತಿಯು, ಅದನ್ನು ಹೇರಿದ ಅದೇ ಪಕ್ಷದಲ್ಲಿ ಹೆಚ್ಚು ಜೀವಂತವಾಗಿದೆ’ ಎಂದು ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ.
ಸದನದಲ್ಲಿ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿದ ಅಸಾದುದ್ದೀನ್ ಓವೈಸಿ!