ಚಾಮರಾಜನಗರ: ಪರಿಶಿಷ್ಠ ಜಾತಿ ಮತ್ತು ಪಂಗಡದ ಹಿತರಕ್ಷಣಾ ಸಮಿತಿ ಸಭೆ ಕರೆಯಬೇಕು ಹಾಗೂ ಬಿ.ರಾಚಯ್ಯ ಜೋಡಿರಸ್ತೆಯಲ್ಲಿ ಮಾಜಿ ರಾಜ್ಯಪಾಲರಾದ ಬಿ.ರಾಚಯ್ಯನವರ ನಾಮಫಲಕ ಅಳವಡಿಸುವಂತೆ ಕೋರಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಿ.ಜಿ.ಸಾಗರ್ ಬಣ) ವತಿಯಿಂದ ನಗರದ ಜಿಲ್ಲಾಡಳಿತ ಭವನದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾಹುಡೇದ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಒಂದು ವರ್ಷದಿಂದ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡ ಹಿತರಕ್ಷಣಾ ಸಮಿತಿ ಸಭೆಯನ್ನು ಜಿಲ್ಲಾಡಳಿತದಿಂದ ನಡೆಸಿಕೊಟ್ಟಿಲ್ಲ. ಆದ್ದರಿಂದ ಸಭೆ ಕರೆದು ಸಮುದಾಂಜಿಢಜಿಗಳ ಕುಂದುಕೊರತೆ ಆಲಿಸಿ ಪರಿಹರಿಸಬೇಕು. ನಗರದ ಬಿ.ರಾಚಯ್ಯ ಜೋಡಿರಸ್ತೆಯ ವೃತ್ತಕ್ಕೆ ನಾಮಫಲಕ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿರುವ ಮನವಿಯಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರ್ ಬಣದ ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಛಲವಾದಿ ಕ್ಷೇಮಾಭಿವೃದ್ದಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮಸುಂದರ್, ಡಿಎಸ್ಎಸ್ನ ಆಟೋ ಉಮೇಶ್, ಶಂಕರಮೂರ್ತಿ ಹನೂರು, ಮಹದೇವಸ್ವಾಮಿ, ಸೋಮಣ್ಣ ಹಾಜರಿದ್ದರು.