ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್‌ರನ್ನು ಭೇಟಿಯಾದ ಕ್ಯಾ.ಚೌಟ

ಭೇಟಿಯಾಗಿ ಮಂಗಳೂರು : ದ.ಕ.ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರನ್ನು ಭೇಟಿಯಾಗಿ ಮಂಗಳೂರು ವಿಶೇಷ ಆರ್ಥಿಕ ವಲಯದಲ್ಲಿರುವ ಜಿಎಂಪಿಎಲ್ ಕಂಪೆನಿಯ ಜತೆ ಜೆಬಿಎಫ್ ಕಂಪೆನಿ ವಿಲೀನವಾಗಿದ್ದು ಉದ್ಯೋಗಿಗಳನ್ನು ಖಾಯಂಗೊಳಿಸುವುದರ ಕುರಿತು ಚರ್ಚಿಸಿದರು. ಗ್ರೀನ್ ಹೈಡ್ರೋಜನ್ ಘಟಕಗಳನ್ನು ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿ ಸ್ಥಾಪಿಸುವ ಸಾಧ್ಯತೆಗಳ ಬಗ್ಗೆ ಸಚಿವರಲ್ಲಿ ಮಾತುಕತೆ ನಡೆಸಿದರು.