More

    ಜೈಲಿನಲ್ಲಿರುವ ಮಗ ದರ್ಶನ್​ನನ್ನು ನೋಡಲು ಬಂದ ತಾಯಿ; ದಚ್ಚು ಭಾವುಕ… ಮೀನಾ ಕಣ್ಣೀರು..

    ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ರನ್ನು ಕೆಲ ಆಪ್ತರು ಭೇಟಿ ಮಾಡುತ್ತಿದ್ದಾರೆ. ಈ ನಡುವೆ ದರ್ಶನ್‌ ಅವರ ತಾಯಿ ಮೀನಾ ಅವರು ಜೈಲಿಗೆ ಭೇಟಿ ನೀಡಿ ಮಗನನನ್ನು ನೋಡಿದ್ದಾರೆ.

    ದರ್ಶನ್‌ ತನ್ನ ಕುಟುಂಬದವರ ಜೊತೆಗೆ ಕೂಡ ಸುಮಧುರ ಬಾಂಧವ್ಯ ಹೊಂದಿಲ್ಲ. ಸಹೋದರ ದಿನಕರ್‌ ಮೇಲೆ ಆತ ಈ ಹಿಂದೆ ಹಲ್ಲೆ ನಡೆಸಿದ್ದಿದೆ.  ಈ ಎಲ್ಲ ಮುನಿಸು ಮರೆತು ಜೈಲಿನಲ್ಲಿರುವ ದರ್ಶನ್​​ ಅವರನ್ನು ನೋಡಲು ಮೀನಾ ತೂಗುದೀಪ ಹಾಗೂ ತಮ್ಮ ದೀನಕರ್​  ಪರಪ್ಪನ ಅಗ್ರಹಾರಕ್ಕೆ ಬಂದು ದರ್ಶನ್​​ ಭೇಟಿ ಮಾಡಿ ತೆರಳಿದ್ದಾರೆ ಎನ್ನಲಾಗಿದೆ.

    ದರ್ಶನ್‌ ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್‌ ಇತ್ತೀಚೆಗೆ ಭೇಟಿಯಾಗಿದ್ದರು. ಈಗ ದರ್ಶನ್​ ಅವರನ್ನು ನೋಡಲು ಜೈಲಿಗೆ ಬಂದಿದ್ದಾರೆ.

    ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಿದ್ದಾರೆ, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಿದ್ದಾರೆ. ಮಗನನ್ನು ಸೆರೆ ಮನೆಯಲ್ಲಿ ನೋಡಿ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts