More

    ಕಾಮಗಾರಿ ಪೂರ್ಣಕ್ಕೆ ಸಂಸದೆ ಪ್ರಭಾ ತಾಕೀತು

    ದಾವಣಗೆರೆ:  ಭದ್ರಾ ಮೇಲ್ದಂಡೆ ಯೋಜನೆಯಡಿ, ತುಂಗಾ ಜಲಾಶಯದಿಂದ ಭದ್ರಾ ಜಲಾಶಯಕ್ಕೆ ನೀರು ಪೂರೈಸುವ ಒಪ್ಪಂದದ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿರುವುದಕ್ಕೆ ಸಂಸದೆ  ಡಾ. ಪ್ರಭಾ ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಭದ್ರಾ ಮೇಲ್ದಂಡೆ ಮತ್ತು ಭದ್ರಾ ಅಚ್ಚುಕಟ್ಟು ಪ್ರದೇಶಗಳಿಗೆ ಸಮಗ್ರ ನೀರು ಸರಬರಾಜು ಪೂರೈಸುವ ಸಂಬಂಧ, ವಿಶ್ವೇಶ್ವರಯ್ಯ ಜಲ ನಿಗಮದ ಅಧಿಕಾರಿಗಳೊಂದಿಗೆ ಭಾನುವಾರ ತಮ್ಮ ಗೃಹಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಉದ್ದೇಶಿತ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
    ಕಾಮಗಾರಿಗೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದರು, ಅನುದಾನ ಲಭಿಸದಿದ್ದಲ್ಲಿ ನನ್ನ ಗಮನಕ್ಕೆ ತಂದರೆ ಸರ್ಕಾರದೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ವಿಶ್ವೇಶ್ವರಯ್ಯ ಜಲನಿಗಮದ ಕಾರ್ಯಪಾಲಕ ಇಂಜಿನಿಯರ್ ರಾಜೇಶ್ ಹದ್ಲಿ, ಎಇಇ ಗೋವರ್ಧನ್, ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನಿಯರ್ ಕಚೇರಿಯ ತಾಂತ್ರಿಕ ಸಹಾಯಕ ಬಿ.ಆರ್. ಮನು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts