ಭವಿಷ್ಯ ರೂಪಿಸುವ ಶಿಕ್ಷಕರಿಗೆ ಗೌರವ : ಉದ್ಯಮಿ ಶ್ರೀನಿವಾಸ ಜೋಗಿ ಸಲಹೆ

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಕ್ಷಕರನ್ನು ಗೌರವಿಸುವುದರೊಂದಿಗೆ, ಅಬ್ದುಲ್ ಕಲಾಂ ಮತ್ತು ವಿವೇಕಾನಂದರು ನಮ್ಮ ಬದುಕಿನ ಆದರ್ಶವಾಗಬೇಕು ಎಂದು ಉದ್ಯಮಿ ಶ್ರೀನಿವಾಸ ಜೋಗಿ ಹೇಳಿದರು. ಕಂಡ್ಲೂರಿನ ರಾಮ್‌ಸನ್ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಕಂಡ್ಲೂರು ನರಸಿಂಹ ಜೋಗಿ ಹಾಗೂ ಗಿರಿಜಾ ನರಸಿಂಹ ಜೋಗಿ ಸ್ಮರಣಾರ್ಥ ನೋಟ್ ಪುಸ್ತಕ, ಕ್ರೀಡಾ ಸಮವಸ್ತ್ರ ವಿತರಿಸಿ ಮಾತನಾಡಿದರು. ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಸಾಮ್ರಾಟ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಂಡ್ಲೂರಿನ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನದ ಆಡಳಿತ ಧರ್ಮದರ್ಶಿ ಚಂದ್ರಶೇಖರ ಜೋಗಿ, ಗ್ರಾಪಂ … Continue reading ಭವಿಷ್ಯ ರೂಪಿಸುವ ಶಿಕ್ಷಕರಿಗೆ ಗೌರವ : ಉದ್ಯಮಿ ಶ್ರೀನಿವಾಸ ಜೋಗಿ ಸಲಹೆ