ಕೊಪ್ಪಳ: ಒಂದೆಡೆ ಬೆಲೆ ಏರಿಕೆ ಮಾಡಿ ಜನರಿಗೆ ಮೋಸ ಮಾಡಲಾಗಿದೆ. ಮತ್ತೊಂದೆಡೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಡವರಿಗೆ ಸೇರಬೇಕಾದ ಹಣದಲ್ಲಿ ಅವ್ಯವಹಾರ ನಡೆದಿದ್ದನ್ನು ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ವಿ.ಚಂದ್ರಶೇಖರ ಮಾತನಾಡಿ, ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ 14 ತಿಂಗಳಲ್ಲಿ ಜನರ ಜೀವನ ದುಸ್ಥರ ಮಾಡಿದೆ. ಬೆಲೆ ಎರಿಕೆ ಮೂಲಕ ಬಡವರ ಜೇಬಿಗೆ ಕೈ ಹಾಕಿ ಲೂಟಿ ಹೊಡೆಯುತ್ತಿದೆ. ಈ ಮೂಲಕ ಸರ್ಕಾರ ನೈತಿಕತೆ ಕಳೆದುಕೊಂಡಿದೆ. ವಿದ್ಯುತ್ ಬಿಲ್, ಹಾಲಿನ ದರ, ತೈಲ ಬೆಲೆ ಗಗನಕ್ಕೇರಿಸಿ ಜನರ ಕೈಗೆ ಚಂಬು ನೀಡಿದ್ದಾರೆ. ದಲಿತರ ಕಲ್ಯಾಣ ಹೆಸರಿನಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 187 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ಇದ್ದರೂ ಸಿಎಂ, ಡಿಸಿಎಂ ಮೌನವಹಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡಿದ್ದಾರೆ. ಮೆಲ್ನೋಟಕ್ಕೆ ದಲಿತರ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಜನರು ನಿಮ್ಮನ್ನು ಕ್ಷಮಿಸುವುದಿಲ್ಲ. ಎಲ್ಲದರ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕೆಂದು ವಾಗ್ದಾಳಿ ನಡೆಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಮಾತನಾಡಿ, ರಾಜ್ಯದ ಅಭಿವೃದ್ಧಿ ಮಾಡುವ ಬದಲು ತಮ್ಮ ಅಭಿವೃದ್ಧಿ ಮಾಡಿಕೊಳ್ಳುತ್ತಿದ್ದಾರೆ. ಸಿಎಂಗೆ ಡಜನ್ನಷ್ಟು ಸಲಹೆಗಾರರು. ಅವರಿಗೆ ಜನರ ತೆರಿಗೆ ಹಣದಲ್ಲಿ ಕ್ಯಾಬಿನೆಟ್ ದರ್ಜೆ ಸೌಲಭ್ಯಗಳು. ಇದು ಉತ್ತಮ ಆಡಳಿತಕ್ಕೆ ಮಾದರಿಯೇ ಎಂದು ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟಪಡಿಬೇಕು ಎಂದು ಪ್ರಶ್ನಿಸಿದರು.
ಯುವ ಟಕ ಕಾರ್ಯಾಧ್ಯಕ್ಷ ರಾಜು ನಾಯಕ ಮಾತನಾಡಿ, ಕ್ಯಾಂಪಸ್ಗಳಲ್ಲಿ ಹಾಡು ಹಗಲೇ ಕೊಲೆಗಳಾದವು. ಹೆಣ್ಣು ಮಕ್ಕಳ ಮಾನ ಹರಾಜಾಯಿತು. ವೈಯಕ್ತಿಕ ದ್ವೇಷ ಾಧನೆಗೆ ಆಡಳಿತ ಯಂತ್ರ ದುರ್ಬಳಕೆ ಮಾಡಿಕೊಳ್ಳಲಾಯಿತು. ಇದು ಸ್ವಯಂ ಘೋಷಿತ ಸಂವಿಧಾನ ರಕ್ಷಕರಿಗೆ ಶೋಭೆಯೇ ಎಂದು ಕಿಡಿಕಾರಿದರು.
ಜೆಡಿಎಸ್ ಜಿಲ್ಲಾ ಗೌರವಾಧ್ಯಕ್ಷ ದೇವಪ್ಪ ಕಟ್ಟಿಮನಿ, ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಜಡಿ, ಪ್ರಮುಖರಾದ ಈಶಪ್ಪ ಮಾದಿನೂರು, ಶರಣಪ್ಪ ಕುಂಬಾರ್, ಯಮನಪ್ಪ ಕಟಗಿ, ಬಸವರಾಜ್ ಗುರುಗುಳಿ, ಕೆಂಚಪ್ಪ ಹಳ್ಳಿ, ಕೃಷ್ಣ ನಾಯಕ್, ವಸಂತ ಕರಿಗಾರ್, ಭೀಮರೆಡ್ಡಿ ಗದ್ದಿಕೇರಿ, ಜಗನ್ನಾಥ್ ರೆಡ್ಡಿ, ಚಿಕ್ಕ ವೀರಣ್ಣ, ಮೂರ್ತೆಪ್ಪ ಹಿಟ್ನಾಳ ಇತರರಿದ್ದರು.