ಸಂಶಿ: ಪಟ್ಟಣದ ಕೆಎಲ್ಇ ಸಂಸ್ಥೆಯ ಮಹಾವಿದ್ಯಾಲಯಯಲ್ಲಿ ಮಂಗಳವಾರ ಡೆಂೆ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ ಜರುಗಿತು.
ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸುರೇಶ ಕಳಸಣ್ಣವರ ಮಾತನಾಡಿ, ‘ಡೆಂೆ ರೋಗ ಲಕ್ಷಣ ಕಂಡುಬಂದ ಭಯಪಡದೆ ಕೂಡಲೆ ಸೂಕ್ತ ಚಿಕಿತ್ಸೆ ಪಡೆಯಬೇಕು’ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರೊ. ರಮೇಶ ಅತ್ತಿಗೇರಿ, ವಿದ್ಯಾರ್ಥಿಗಳು ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳಿಗೆ ಡೆಂೆ ಜ್ವರ ನಿಯಂತ್ರಣ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಎಸ್.ಸಿ. ಅಂಗಡಿ ನಿರೂಪಿಸಿದರು. ಸಿ.ಎಸ್. ಗುರುಮಠ ಇತರರಿದ್ದರು.