ನವದೆಹಲಿ: ನಿನ್ನೆ (ಜೂ.29) ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಮುಖಾಮುಖಿಯಾಗಿ, ರೋಮಾಂಚನಕಾರಿ ಆಟಕ್ಕೆ ಸಾಕ್ಷಿಯಾಯಿತು. 7 ರನ್ಗಳ ಅಂತರದಿಂದ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಬೀಗಿದ ಟೀಮ್ ಇಂಡಿಯಾ, 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಟ್ರೋಫಿಗೆ ಮುತ್ತಿಟ್ಟಿತು. ಗೆಲುವಿನ ಸಂಭ್ರಮದಲ್ಲಿದ್ದ ತಂಡವನ್ನು ನೋಡಿ ಭಾವುಕರಾದ ರೋಹಿತ್, ತಮ್ಮ ಸಹ ಆಟಗಾರರನ್ನು ತಬ್ಬಿ, ಪರಸ್ಪರ ಖುಷಿ ಹಂಚಿಕೊಂಡರು.
ಇದನ್ನೂ ಓದಿ: ಜಪ್ತಿಯಾದ ಟ್ರ್ಯಾಕ್ಟರ್ಗಳಿಗೂ ಹೊಸ ನೋಂದಣಿ!
ಇನ್ನು ವಿಶ್ವಕಪ್ ಟ್ರೋಫಿ ಗೆಲ್ಲುತ್ತಿದ್ದಂತೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ವಿರಾಟ್ ಕೊಹ್ಲಿ ಅವರ ಹೃದಯಸ್ಪರ್ಶಿ ಮಾತುಗಳನ್ನು ಕಂಡು ಅಭಿಮಾನಿಗಳು ಕಣ್ಣೀರಿಟ್ಟರು. ಕೊಹ್ಲಿ ಬೆನ್ನಲ್ಲೇ ರೋಹಿತ್ ಕೂಡ ನಿವೃತ್ತಿ ಘೋಷಿಸಿದರು. ಈ ಹಿಂದೆಯೇ ಭಾರತದ ಹೆಡ್ ಕೋಚ್ ಆಗಿ ತಂಡವನ್ನು ಮುನ್ನಡೆಸಿಕೊಂಡು ಬಂದಿದ್ದ ರಾಹುಲ್ ದ್ರಾವಿಡ್, ಈ ಟೂರ್ನಿ ಮುಗಿಯುತ್ತಿದ್ದಂತೆ ತಮ್ಮ ಕೋಚ್ ಹುದ್ದೆಯಿಂದ ಹೊರನಡೆಯಲಿದ್ದಾರೆ ಎಂಬ ವಿಷಯ ಸ್ಪಷ್ಟವಾಗಿ ತಿಳಿದಿತ್ತು. ಅದರಂತೆಯೇ ಪಂದ್ಯ ಮುಗಿದ ಬಳಿಕ ದ್ರಾವಿಡ್ ವಿದಾಯ ಹೇಳಿದರು.
ದಕ್ಷಿಣ ಆಫ್ರಿಕಾ ವಿರುದ್ಧ ವಿಶ್ವಕಪ್ ಟ್ರೋಫಿ ಗೆದ್ದ ಭಾರತ, ಈ ಗೆಲುವನ್ನು ರಾಹುಲ್ ದ್ರಾವಿಡ್ ಅವರಿಗೆ ಅರ್ಪಿಸಿತು. ಇನ್ನು ಟೂರ್ನಿಯ ಆರಂಭದ ಪಂದ್ಯಗಳಲ್ಲಿ ಸತತ ಕಳಪೆ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ, ಫೈನಲ್ ಮ್ಯಾಚ್ನಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿ, ತಂಡಕ್ಕೆ ಅದ್ಭುತ ಕೊಡುಗೆ ನೀಡಿದರು. ಈ ಹಿಂದೆ ವಿರಾಟ್ ಕಳಪೆ ಫಾರ್ಮ್ಗೆ ವ್ಯಾಪಕವಾಗಿ ಕಿಡಿಕಾರಿದ್ದ ನೆಟ್ಟಿಗರು, ಎಲ್ಲಿಹೋಯಿತು ‘ರನ್ ಮಷಿನ್’
ಅಬ್ಬರ? ಆರಂಭಿಕ ಬ್ಯಾಟ್ಸ್ಮನ್ ಆಗಿ ವಿರಾಟ್ರನ್ನು ಕಳಿಸಬೇಡಿ ಎಂದೆಲ್ಲಾ ಟೀಕಿಸಿದ್ದರು.
ಇದನ್ನೂ ಓದಿ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜಿಲ್ಲೆಯ ವಿದ್ಯಾರ್ಥಿಗಳು: ದಕ್ಷಿಣ ಭಾರತ ವಲಯ ಚಾಂಪಿಯನ್ಷಿಪ್ನಲ್ಲಿ ಸಾಧನೆ
ಈ ಟೀಕೆಗಳನ್ನು ಗಮನಿಸಿದ್ದ ಕ್ಯಾಪ್ಟನ್ ರೋಹಿತ್ ಮತ್ತು ಕೋಚ್ ರಾಹುಲ್ ದ್ರಾವಿಡ್, ಕೊಹ್ಲಿ ಪರ ನಿಂತು ಟೀಕಾಕಾರಿಗೆ ಉತ್ತರಿಸಿದ್ದರು. ಯಾವ ವಿಷಯಕ್ಕೆ ಇಷ್ಟೊಂದು ಟೀಕೆ ವ್ಯಕ್ತವಾಗುತ್ತಿದೆಯೋ, ಅದು ಫೈನಲ್ ಪಂದ್ಯದಲ್ಲಿ ಬದಲಾಗಲಿದೆ. ವಿರಾಟ್ರಿಂದ ನೀವು ಬೇರೇನೋ ನೋಡುತ್ತೀರಿ ಎಂದು ಶರ್ಮ ಹೇಳಿದ್ದರು. ಅವರ ಬೆನ್ನಲ್ಲೇ ಮಾತನಾಡಿದ ದ್ರಾವಿಡ್, ಕೊಹ್ಲಿ ಕಳಪೆ ಪ್ರದರ್ಶನ ತೋರಿದ್ದಾರೆ. ಆದರೆ, ಫೈನಲ್ನಲ್ಲಿ ದೊಡ್ಡದೇನೋ ಒಂದು ನಡೆಯಲಿದೆ. ಅದನ್ನು ನೀವೆಲ್ಲಾ ನೋಡುತ್ತೀರಿ. ವಿರಾಟ್ ಅದಕ್ಕೆ ಸಾಕ್ಷಿಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು. ಅಂದು ರಾಹುಲ್, ರೋಹಿತ್ ನುಡಿದ ಭವಿಷ್ಯ ಇಂದು ನಿಜವಾಗಿದ್ದು, ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ,(ಏಜೆನ್ಸೀಸ್).
ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್ರನ್ನು ಕಪಿಲ್ ದೇವ್ಗೆ ಹೋಲಿಸಿದ ಮಾಜಿ ಕ್ರಿಕೆಟಿಗ