ಜೈಪುರ: ರಾಜಸ್ಥಾನದ ಬಿಕಾನೇರ್ನ ಮಹಾಜನ್ನ ಭಾರತಮಾಲಾ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಟ್ರಕ್ಗಳು ಬೆಂಕಿಗೆ ಆಹುತಿಯಾಗಿವೆ. ಈ ಅಪಘಾತದಲ್ಲಿ ಟ್ರಕ್ ಚಾಲಕ ಸಜೀವ ದಹನವಾಗಿದ್ದಾನೆ. ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಕಾಲೇಜಿನಲ್ಲಿ ಹಿಜಾಬ್ ನಿಷೇಧಿಸಿದ್ದು ಸರಿ ಇದೆ: ಮಹತ್ವದ ತೀರ್ಪು ನೀಡಿದ ಬಾಂಬೆ ಹೈಕೋರ್ಟ್
ಘಟನೆಯಿಂದಾಗಿ ಹೆದ್ದಾರಿಯಲ್ಲಿ ಭಾರಿ ಸಂಖ್ಯೆಯಲ್ಲಿ ವಾಹನಗಳು ಸಿಲುಕಿಕೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.
ಬಿಕಾನೇರ್ನ ಮಹಾಜನ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರತ್ಮಾಲಾ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ಎರಡು ಟ್ರಕ್ಗಳ ನಡುವೆ ಡಿಕ್ಕಿ ಸಂಭವಿಸಿ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಎರಡು ಲಾರಿಗಳಿಗೆ ಬೆಂಕಿ ತಗುಲಿದೆ. ಗಾಯಾಳುಗಳನ್ನು ಬಿಕಾನೇರ್ನ ಪಿಬಿಎಂ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬಿಕಾನೇರ್ ಜಿಲ್ಲೆಯ ಮೂಲಕ ಹಾದುಹೋಗುವ ಜಾಮ್ನಗರ-ಅಮೃತಸರ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಕೆಟ್ಟುಹೋದ ಜೈತ್ಪುರ ಟ್ರಕ್ ಅನ್ನು ಸರಿಪಡಿಸುವಲ್ಲಿ ಟ್ರಕ್ ಚಾಲಕ ಮತ್ತು ಸಹಾಯಕ ನಿರತರಾಗಿದ್ದರು. ಅಷ್ಟರಲ್ಲಿ ಹಿಂದಿನಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಆಗ ಎರಡೂ ಟ್ರಕ್ಗಳು ಬೆಂಕಿಗೆ ಆಹುತಿಯಾಗಿವೆ.
ಈ ಘಟನೆಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಲಾರಿಯ ಚಾಲಕ ಲಾರಿಯೊಳಗೆ ಸುಟ್ಟು ಕರಕಲಾಗಿದ್ದು, ಹೊರಗೆ ನಿಲ್ಲಿಸಿದ್ದ ಟ್ರಕ್ ರಿಪೇರಿ ಮಾಡುತ್ತಿದ್ದ ಚಾಲಕ, ನಿರ್ವಾಹಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ.
‘ನನ್ನ ಮಗಳು ಅಳುತ್ತಲೇ ಇರುತ್ತಾಳೆ.. ನಿಮಗೆ ನನ್ನ ಶಾಪ ತಟ್ತದೆ’: ರೇಣು ದೇಸಾಯಿ ಹೀಗೆ ಹೇಳಿದ್ದು ಇದಕ್ಕೇ ನೋಡಿ?