ನವದೆಹಲಿ: ಬಾರ್ಬಡೋಸ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲುತ್ತಿದ್ದಂತೆ ತಂಡದ ಸ್ಟಾರ್ ಕ್ರಿಕೆಟಿಗರಾದ ಕ್ಯಾಪ್ಟನ್ ರೋಹಿತ್ ಶರ್ಮ, ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಟಿ20 ಮಾದರಿಗೆ ನಿವೃತ್ತಿ ಘೋಷಿಸಿದರು. ಈ ನಿರ್ಧಾರ ಕೈಗೊಳ್ಳಲು ಬಿಸಿಸಿಐ ಕಾರಣ ಎಂಬುದು ಸದ್ಯ ಎಲ್ಲರಿಗೂ ತಿಳಿದಿರುವ ಸಂಗತಿ. ಭಾರತ ತಂಡದಲ್ಲಿ ಯುವ ಕ್ರಿಕೆಟಿಗರಿಗೆ ಅವಕಾಶ ನೀಡುವ ಉದ್ದೇಶದಿಂದ ಭಾರತೀಯ ಕ್ರಿಕೆಟ್ ಮಂಡಳಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾಗಿ ತಿಳಿಸಿದೆ.
ಇದನ್ನೂ ಓದಿ: ಬೆಳಗ್ಗೆ ಎದ್ದಾಗ ಈ ಲಕ್ಷಣ ಕಂಡು ಬಂದ್ರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ…
2024ರ ಟಿ20 ವಿಶ್ವಕಪ್ ಟೂರ್ನಿಯೇ ತನ್ನ ಕೊನೆ ಎಂದು ಈ ಹಿಂದೆಯೇ ತಿಳಿಸಿದ್ದ ಹೆಡ್ ಕೋಚ್ ರಾಹುಲ್ ದ್ರಾವಿಡ್, ಅದರಂತೆಯೇ ಇಂದು ಭಾರತದ ಕೋಚ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಐಪಿಎಲ್ 17ನೇ ಆವೃತ್ತಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮೆಂಟರ್ ಆಗಿ ತಂಡವನ್ನು ಚಾಂಪಿಯನ್ ಪಟ್ಟಕೇರಿಸಿದ ಗೌತಮ್ ಗಂಭೀರ್ಗೆ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಆಫರ್ ಕೇಳಿಬಂದಿತ್ತು. ಇದರ ಬಗ್ಗೆ ಒಲವು ತೋರಿಸಿದ್ದ ಗಂಭೀರ್, ಹೆಡ್ ಕೋಚ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರಾ ಎಂಬುದನ್ನು ಸದ್ಯ ಕಾದು ನೋಡಬೇಕಿದೆ.
ಇನ್ನು ಟೀಮ್ ಇಂಡಿಯಾದ ನೂತನ ಹೆಡ್ ಕೋಚ್ ಆಗಿ ಗಂಭೀರ್ ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತ ಎಂದೇ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ, ಈ ಬಗ್ಗೆ ಬಿಸಿಸಿಐ ಹೊರಡಿಸಲಿರುವ ಅಧಿಕೃತ ಘೋಷಣೆಗಾಗಿ ಕಾಯಬೇಕಿದೆ. ಇದೆಲ್ಲದರ ಮಧ್ಯೆ ಗೌತಮ್ ಗಂಭೀರ್ ಭಾರತಕ್ಕೆ ಕೋಚ್ ಆದರೆ ಈ ಐವರು ಸ್ಟಾರ್ ಆಟಗಾರರನ್ನು ಆಯಾ ಫಾರ್ಮೆಟ್ಗಳಲ್ಲಿ ಆಡಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಹಾಸನ SP ಕಚೇರಿ ಆವರಣದಲ್ಲೇ ಪತ್ನಿಗೆ ಚೂರಿ ಚುಚ್ಚಿ ಕೊಂದ ಕಾನ್ಸ್ಸ್ಟೇಬಲ್; ಇಬ್ಬರ ನಡುವೆ ಅದೇನಾಗಿತ್ತು?
- ರೋಹಿತ್ ಶರ್ಮಾ – ಟಿ20 ಮತ್ತು ಟೆಸ್ಟ್
- ವಿರಾಟ್ ಕೊಹ್ಲಿ – ಟಿ20
- ರವೀಂದ್ರ ಜಡೇಜಾ – ವೈಟ್ ಬಾಲ್ ಫಾರ್ಮೆಟ್
- ಮೊಹಮ್ಮದ್ ಶಮಿ – ವೈಟ್ ಬಾಲ್ ಫಾರ್ಮೆಟ್
- ಮೊಹಮ್ಮದ್ ಸಿರಾಜ್ – ವೈಟ್ ಬಾಲ್ ಫಾರ್ಮೆಟ್
ಅಂದು ಅವಮಾನ ಇಂದು ಸನ್ಮಾನ: ಇದಕ್ಕೆ ಹೇಳೋದು… ಹಾರ್ದಿಕ್ಗೆ ಫ್ಯಾನ್ಸ್ ಕೊಟ್ಟ ಸಂದೇಶವಿದು!