ಪಡುಬಿದ್ರಿ: ಅದಾನಿ ಸಮೂಹದ ಸ್ಥಾಪಕ ಗೌತಮ್ ಅದಾನಿ ಅವರ ಹುಟ್ಟುದಿನವಾದ ಜೂನ್ 24ರಂದು ಅದಾನಿ ಪ್ರತಿಷ್ಠಾನ ದೇಶದೆಲ್ಲೆಡೆ ರಕ್ತದಾನ ಶಿಬಿರ ಹಮ್ಮಿಕೊಂಡು ಆಯಾ ಪ್ರದೇಶದ ರಕ್ತನಿಧಿಗಳಿಗೆ ನೀಡುತ್ತಿದೆ. ಇದರಿಂದ ಅನೇಕ ಜನರಿಗೆ ಉಪಯುಕ್ತವಾಗಿದೆ ಎಂದು ಅದಾನಿ ಸಮೂಹದ ದಕ್ಷಿಣ ಭಾರತ ಅಧ್ಯಕ್ಷ ಕಿಶೋರ್ ಆಳ್ವ ಹೇಳಿದರು.
ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಒಡೆತನದ ಅದಾನಿ ಪವರ್ ಲಿಮಿಟೆಡ್, ಉಡುಪಿ ಟಿಪಿಪಿ ಸಂಸ್ಥೆ ತನ್ನ ಸಿಎಸ್ಆರ್ ಯೋಜನೆ ನಿರ್ವಹಿಸುವ ಅದಾನಿ ಫೌಂಡೇಶನ್ ವತಿಯಿಂದ ಉಡುಪಿ ಟಿಪಿಪಿ ಸ್ಥಾವರದಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ಕೇಂದ್ರದ ಮುಖ್ಯಸ್ಥೆ ಡಾ.ವೀಣಾಕುಮಾರಿ, ವೆನ್ಲಾಕ್ ಆಸ್ಪತ್ರೆ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ.ಪಲಕ್ ಉಪಸ್ಥಿತರಿದ್ದರು. ದಿನವಿಡೀ ನಡೆದ ಶಿಬಿರದಲ್ಲಿ 350 ಯೂನಿಟ್ ರಕ್ತ ಸಂಗ್ರಹಿಸಲಾಯಿತು.
9 ವರ್ಷಗಳಿಂದ ಜೂನ್ನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳುತ್ತಿದ್ದು, ಅದಾನಿ ಸಮೂಹದ ಎಲ್ಲ ಉದ್ಯೋಗಿಗಳು ಸ್ವಇಚ್ಛೆಯಿಂದ ರಕ್ತದಾನ ಮಾಡುತ್ತಾ ಉಡುಪಿ ಮತ್ತು ಮಂಗಳೂರು ಜಿಲ್ಲಾ ಆಸ್ಪತ್ರೆಗಳ ರಕ್ತನಿಧಿಗೆ ನೀಡುತ್ತಿರುವುದು ಹೆಮ್ಮೆಯ ವಿಷಯ.
-ಡಾ.ವೀಣಾಕುಮಾರಿ, ಮುಖ್ಯಸ್ಥೆ, ರಕ್ತನಿಧಿ ಕೇಂದ್ರ ಉಡುಪಿ ಜಿಲ್ಲಾ ಆಸ್ಪತ್ರೆ