ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಹಡಿಲು ಬಿದ್ದಿರುವ ಕೃಷಿಭೂಮಿಯನ್ನು ಅಭಿವೃದ್ಧಿಪಡಿಸಲು ರೈತರಿಗೆ ಮನಸ್ಸು ಇದ್ದರೂ ಕೆಲ ರೈತರಲ್ಲಿ ಸಮರ್ಪಕವಾದ ದಾಖಲಾತಿಗಳು, ಭದ್ರತೆಗಳು ಇಲ್ಲದೆ ಇರುವ ಕಾರಣದಿಂದ ಆರ್ಥಿಕ ಸಹಕಾರ ಪಡೆಯಲು ಅಡಚಣೆ ಆಗುತ್ತಿತ್ತು. ಇದಕ್ಕೆ ಪರ್ಯಾಯವಾಗಿ ಪ್ರಗತಿ ಬಂಧು ಗುಂಪುಗಳ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸುಲಭ ರೀತಿಯಲ್ಲಿ ಆರ್ಥಿಕ ಚೈತನ್ಯ ನೀಡಿರುವುದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪರಿಣಾಮ ರೈತರು ತಮ್ಮ ಕೃಷಿ ಅಭಿವೃದ್ಧಿಗೆ ಪೂರಕವಾದ ಬೋರ್ವೆಲ್ ರಚನೆ, ಪಂಪ್ಸೆಟ್ ಖರೀದಿ, ನೀರಾವರಿಗೆ ಪೂರಕವಾದ ಸೌಲಭ್ಯಗಳ ಅಳವಡಿಕೆ ಮಾಡಿಕೊಂಡಿದ್ದಾರೆ ಎಂದು ಯೋಜನೆಯ ದ.ಕ.ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಣಿಯೂರು ವಲಯದ ಮೈರೊಳತಡ್ಕ, ಮೋಗ್ರು, ಬಂದಾರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ ಹಾಗು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವ ಉದ್ಯಮಿ ಜಯ ಪ್ರಕಾಶ್ ಕಡಮ್ಮಜೆ ಮಾತನಾಡಿದರು. ಮೈರೋಲ್ತಡ್ಕ ಒಕ್ಕೂಟದ ಅಧ್ಯಕ್ಷ ಕೃಷ್ಣಯ್ಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಬಂದಾರು ಗ್ರಾಪಂ ಅಧ್ಯಕ್ಷ ದಿನೇಶ್ ಗೌಡ ಕಂಡಿಗ, ಪ್ರಗತಿ ಪರ ಕೃಷಿಕ ಲಿಂಗಪ್ಪ ಪೋಯ್ಯೋಲೆ , ಧರ್ಣಪ್ಪ ಗೌಡ ಅಂಡಿಲ, ಬಾಬು ಗೌಡ ಮಡ್ಯಾಳಕಂಡ, ನೂತನ ಒಕ್ಕೂಟದ ಅಧ್ಯಕ್ಷರಾದ ಗಂಗಾಧರ ಪೂಜಾರಿ, ವಿಜಯ, ಸುಂದರ ಪೂಜಾರಿ, ನಿಕಟಪೂರ್ವ ಅಧ್ಯಕ್ಷರಾದ ಲೋಕೇಶ್, ಲತಾ, ವೆಂಕಟರಮಣ ಗೌಡ ಬಾಳೆಹಿತ್ಲು ಉಪಸ್ಥಿತರಿದ್ದರು.
ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ನಿರೂಪಿಸಿದರು. ವಲಯ ಮೇಲ್ವಿಚಾರಕ ಶಿವಾನಂದ ಸ್ವಾಗತಿಸಿದರು, ಸೇವಾಪ್ರತಿನಿಧಿಗಳಾದ ಚಂದ್ರಕಲಾ ಹಾಗೂ ನಿರಂಜನ್ ಸಹಕರಿಸಿದರು.