ಕೋಟ: ಇಂದು ಸರ್ಕಾರಿ ಶಾಲೆಗಳು ಅಭಿವೃದ್ದಿಯ ಹಾದಿಯತ್ತ ಸಾಗುತ್ತಿದೆ. ಇದು ಆಶಾದಾಯಕ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ನುಡಿದರು.
ಚಿತ್ರಪಾಡಿ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಪಿಎಂಶ್ರೀ ಯೋಜನೆಯಡಿ ಮಂಜೂರಾದ ಎಲ್ಕೆಜಿ ತರಗತಿ ಉದ್ಘಾಟನೆ ಹಾಗೂ ಗೀತಾನಂದ ಫೌಂಡೇಶನ್ ಕೊಡಮಾಡಿದ ನೋಟ್ಬುಕ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಉದ್ಯಮಿ ಕಿಶನ್ ಹೆಗ್ಡೆ ಕೊಳ್ಳೆಬೈಲು, ಶ್ರೀ ಗುರು ನರಸಿಂಹ ದೇವಸ್ಥಾನ ಸಾಲಿಗ್ರಾಮ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್. ಕಾರಂತ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ, ವಕೀಲ ಯೋಗೀಶ್ ಕುಮಾರ್, ಇಂಜಿನಿಯರ್ ನಾಗರಾಜ ಸೋಮಯಾಜಿ ಪಾರಂಪಳ್ಳಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಗಣಪತಿ, ಸಾಲಿಗ್ರಾಮ ಪಪಂ ಸದಸ್ಯೆ ರತ್ನಾ ನಾಗರಾಜ ಗಾಣಿಗ, ಪಪಂ ಸದಸ್ಯ ರಾಜು ಪೂಜಾರಿ, ಶಿಕ್ಷಣ ಇಲಾಖೆ ಸಂಯೋಜಕ ಪ್ರಕಾಶ್ ಬಿ.ಬಿ., ಸಿಆರ್ಪಿ ಸವಿತಾ ಆಚಾರ್, ಕಾರ್ತಟ್ಟು ಅಘೋರೇಶ್ವರ ದೇಗುಲ ಅಧ್ಯಕ್ಷ ಚಂದ್ರಶೇಖರ್ ಕಾರಂತ್, ಶಾಲಾ ಪ್ರೋತ್ಸಾಹಕರಾದ ಶಿವರಾಮ ಉಡುಪ, ಶಾಲಾ ಅಕ್ಷರರಥ ಸಮಿತಿ ಅಧ್ಯಕ್ಷ ನಾಗರಾಜ್ ಗಾಣಿಗ, ಎಸ್ಡಿಎಂಸಿ ಅಧ್ಯಕ್ಷ ಶಂಕರ್ ದೇವಾಡಿಗ, ಉದ್ಯಮಿಗಳಾದ ಅರುಣ್ ಕುಂದರ್, ಭೋಜ ಪೂಜಾರಿ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಜಗದೀಶ ಉಪಾಧ್ಯ ಉಪಸ್ಥಿತರಿದ್ದರು. ಮುಖ್ಯಶಿಕ್ಷಕಿ ಶಾಲಿನಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ನಿರೂಪಿಸಿದರು. ಶಿಕ್ಷಕಿ ಮಾಲಿನಿ ವಂದಿಸಿದರು.
ದಾನಿಗಳಿಗೆ ಅಭಿನಂದನೆ
ಎಲ್ಕೆಜಿ ತರಗತಿ ಕೊಠಡಿಯನ್ನು ಶಾಸಕರು ಉದ್ಘಾಟಿಸಿದರು. ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ರಾಘವೇಂದ್ರ ಆಚಾರ್ ಕಪಾಟ್ ಉದ್ಘಾಟಿಸಿದರು. ಶಾಲಾಭಿವೃದ್ಧಿ ನೆರವು ನೀಡಿದ ದಾನಿಗಳಾದ ರಂಗನಾಥ್, ರಾಘವೇಂದ್ರ ಆಚಾರ್,ಉದಯ್ ನಾಯಕ್ಗೆ ಅಭಿನಂದನೆ ಸಲ್ಲಿಸಲಾಯಿತು.