More

    ಜು.3ರಂದು ರಂಭಾಪುರೀಶ ನಿವಾಸ ಉದ್ಘಾಟನೆ

    ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಹರಕೆರೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನಾ ಸಮಾರಂಭ ಜು.3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ನಡೆಯಲಿದೆ ಎಂದು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು.

    ಅಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸಮಾರಂಭ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆ ಗೌರವಾಧ್ಯಕ್ಷ ಎಡೆಯೂರು ಕ್ಷೇತ್ರದ ಶ್ರೀ ರೇಣುಕ ಶಿವಾಚಾರ್ಯ ಸ್ವಾಮೀಜಿ, ಮುಕ್ತಿಮಂದಿರ ಕ್ಷೇತ್ರದ ಶ್ರೀ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ಉಪಸ್ಥಿತರಿರುವರು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
    ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಎಂಎಲ್‌ಸಿಗಳಾದ ಆಯನೂರು ಮಂಜುನಾಥ, ಎಸ್.ರುದ್ರೇಗೌಡ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪ್ರಮುಖರಾದ ಎಸ್.ಪಿ.ದಿನೇಶ್, ರುದ್ರಮುನಿ ಎಸ್. ಸಜ್ಜನ್, ಸಿ.ಮಹೇಶ್ ಮೂರ್ತಿ ಮತ್ತಿತರರು ಭಾಗವಹಿಸುವರು ಎಂದರು.
    ಮಳಲಿಮಠದ ಶ್ರೀ ನಾಗಭೂಷಣ ಶಿವಾಚಾರ್ಯ, ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ, ಕಡೇನಂದಿಹಳ್ಳಿ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ, ಹಣ್ಣೆಮಠದ ಶ್ರೀ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ, ಹುಣಸಘಟ್ಟದ ಶ್ರೀ ಗುರುಮೂರ್ತಿ ಶಿವಾಚಾರ್ಯ, ಬೀರೂರು ಶ್ರೀ ರುದ್ರಮುನಿ ಶಿವಾಚಾರ್ಯ, ತಾವರೆಕೆರೆ ಶ್ರೀ ಡಾ. ಅಭಿನವ ಸಿದ್ಧಲಿಂಗ ಶಿವಾಚಾರ್ಯ, ಚನ್ನಗಿರಿಯ ಶ್ರೀ ಡಾ. ಕೇದಾರ ಶಿವಶಾಂತವೀರ ಶಿವಾಚಾರ್ಯ, ನಂದಿಪುರದ ಶ್ರೀ ನಂದೀಶ್ವರ ಶಿವಾಚಾರ್ಯ, ರಟ್ಟಿಹಳ್ಳಿಯ ಶ್ರೀ ವಿಶ್ವೇಶ್ವರ ದೇವರು ನುಡಿನಮನ ಸಲ್ಲಿಸುವರು. ಭೂ ದಾನಿಗಳಾದ ಟಿ.ವಿ.ಈಶ್ವರಯ್ಯ ಸಹೋದರರು ಸೇರಿ ಗಣ್ಯರಿಗೆ ರಂಭಾಪುರಿ ಶ್ರೀಗಳು ಗುರುರಕ್ಷೆ ನೀಡುವರು ಎಂದು ಹೇಳಿದರು.
    ಜು.2ರಂದು ಶಿವಮೊಗ್ಗದ ವೇ.ವಿರೂಪಾಕ್ಷಯ್ಯ ಶಾಸ್ತ್ರಿಗಳು ಮತ್ತು ಸಂಗಡಿಗರ ವೈದಿಕತ್ವದಲ್ಲಿ ನೂತನ ಕಟ್ಟಡದ ವಾಸ್ತು ಶಾಂತಿಪೂಜೆ ನಡೆಯಲಿದೆ ಎಂದರು. ಬಿಳಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಮಳಲಿಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಎಚ್.ವಿ.ಮರುಳೇಶ್, ಶಾಂತಾ ಆನಂದ, ಟಿ.ವಿ.ಶಿವಕುಮಾರ್, ಟಿ.ವಿ.ಶಿವಲಿಂಗಯ್ಯ, ಸಿ.ಎಚ್.ಬಾಳನಗೌಡ್ರ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts