ವಿಜಯವಾಣಿ ಸುದ್ದಿಜಾಲ ಕಡಬ
ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಪ್ರಾಥಮಿಕ ಅರಿವು ವಿದ್ಯಾರ್ಥಿ ಸರ್ಕಾರದ ರಚನೆ ಪ್ರಕ್ರಿಯೆ ಮೂಲಕ ಸಿಗುತ್ತದೆ. ಈ ಮಾದರಿಯನ್ನು ಬಳಸಿಕೊಂಡು ವಿದ್ಯಾರ್ಥಿಗಳು ದೇಶಕ್ಕೆ ಸತ್ಪ್ರಜೆಗಳಾಗಿ ಬಾಳಬೇಕು ಎಂದು ಸವಣೂರು ವಿದ್ಯಾರಶ್ಮಿ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಹೇಳಿದರು.
ಸಂಸ್ಥೆಯಲ್ಲಿ ನಡೆದ 2024-25ನೇ ಸಾಲಿನ ವಿದ್ಯಾರ್ಥಿ ಸರ್ಕಾರವನ್ನು ಉದ್ಘಾಟಿಸಿ ಮಾತನಾಡಿದರು. ಸುಳ್ಯದ ನೆಹರೂ ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪ್ರಸನ್ನ ಮಾತನಾಡಿ, ವಿದ್ಯಾರ್ಥಿ ಸರ್ಕಾರದ ಪದಾಧಿಕಾರಿಗಳು ಎಲ್ಲ ವಿದ್ಯಾರ್ಥಿಗಳಿಗೆ ಮಾದರಿಯಾಗಿರಿ. ಹೆಚ್ಚು ಓದುವ ಮತ್ತು ತಾಳ್ಮೆಯ ಮನೋಭಾವನೆ ಜತೆಗೆ ಮೂಲಭೂತ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಶುಭಹಾರೈಸಿದ್ದರು. ಪದವಿ ಪೂರ್ವ ವಿಭಾಗದ ಪ್ರಾಂಶುಪಾಲ ಸೀತಾರಾಮ ಕೇವಳ ಪ್ರತಿಜ್ಞಾ ವಿಧಿ ಬೋಧಿಸಿದರು. ಸನಾ ಫಾತಿಮಾ ಆತಿಥಿಯನ್ನು ಪರಿಚಯಿಸಿದರು. ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ ಸ್ವಾಗತಿಸಿದರು. ಎಂ.ವೈಷ್ಣವಿ ವಂದಿಸಿದರು. ಇಂಚರ ಕಾರ್ಯಕ್ರಮ ನಿರೂಪಿಸಿದರು.