ಅಮರಾವತಿ: ಆಂಧ್ರಪ್ರದೇಶ ಸರ್ಕಾರ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ತಮ್ಮ ಪಕ್ಷದ ಕಚೇರಿಯನ್ನು ಕೆಡವಿದ್ದಕ್ಕಾಗಿ ವೈಎಸ್ಆರ್ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರವನ್ನು ತರಾಟೆಗೆ ತೆಗೆದು. ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಪಕ್ಷದ ಕಚೇರಿಯನ್ನು ಕೆಡವಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.
ಇದನ್ನು ಓದಿ: ಮಣಿಪುರ ಸಮಸ್ಯೆಗೆ ಮೋದಿ ಸರ್ಕಾರ ಶೀಘ್ರದಲ್ಲೇ ಪರಿಹಾರ ನೀಡಲಿದೆ; ಸಿಎಂ ಬಿರೇನ್ ಸಿಂಗ್
ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಕ್ರಮ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಕ್ಕೆ ನೋಟಿಸ್ ಜಾರಿ ಮಾಡಿತ್ತು. ಸಿಆರ್ಡಿಎ ನೋಟಿಸ್ ಪ್ರಶ್ನಿಸಿ ವೈಎಸ್ಆರ್ಸಿಪಿ ಹೈಕೋರ್ಟ್ ಮೆಟ್ಟಿಲೇರಿತ್ತು. ಯಾವುದೇ ಡೆಮಾಲಿಷನ್ ಚಟುವಟಿಕೆಯನ್ನು ಸ್ಥಗಿತಗೊಳಿಸುವಂತೆ ನ್ಯಾಯಾಲಯವು ಆದೇಶಿಸಿದೆ. ಈ ಆದೇಶವನ್ನು ವೈಎಸ್ಆರ್ಸಿಪಿ ವಕೀಲರು ಆಯುಕ್ತರಿಗೆ ತಿಳಿಸಲಾಗಿದೆ ಎಂದು ಪಕ್ಷವು ಹೇಳಿಕೊಂಡಿದೆ.
ಚಂದ್ರಬಾಬು ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. “ಒಬ್ಬ ಸರ್ವಾಧಿಕಾರಿಯಂತೆ, ಅವರು ಬಹುತೇಕ ಸಿದ್ಧವಾಗಿದ್ದ ವೈಎಸ್ಆರ್ ಕಾಂಗ್ರೆಸ್ ಮುಖ್ಯ ಕಚೇರಿಯನ್ನು ಬುಲ್ಡೋಜರ್ಗಳಿಂದ ಕೆಡವಿದರು. ಈ ಕ್ರಮಗಳ ಮೂಲಕ ನಾಯ್ಡು ಅವರು ಮುಂದಿನ ಐದು ವರ್ಷಗಳ ಕಾಲ ತಮ್ಮ ಆಡಳಿತ ಹೇಗಿರುತ್ತದೆ ಎಂಬ ಸ್ಪಷ್ಟ ಸಂದೇಶ ರವಾನಿಸುತ್ತಿದ್ದಾರೆ. ಈ ಬೆದರಿಕೆ, ಹಿಂಸಾಚಾರಗಳಿಂದ ವೈಎಸ್ಆರ್ಸಿಪಿ ಹಿಂದೆ ಸರಿಯುವುದಿಲ್ಲ. ಎಂದು ಜಗನ್ಮೋಹನ್ ರೆಡ್ಡಿ ಸಾಮಾಜಿಕ ಜಾಲತಾಣದ ತಮ್ಮ ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್ನಲ್ಲಿ ತಿಳಿಸಿದ್ದಾರೆ. (ಏಜೆನ್ಸೀಸ್)
ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ಸಿಂಗ್ ನಿಜ್ಜರ್ಗೆ ಕೆನಡಾ ಸಂಸತ್ತಿನಲ್ಲಿ ಶ್ರದ್ಧಾಂಜಲಿ; ಭಾರತದ ಕೌಂಟರ್ ಹೀಗಿದೆ