ನವದೆಹಲಿ: ರೋಹಿತ್ ಶರ್ಮ ಸಾರಥ್ಯದಲ್ಲಿ ಭಾರತ ತಂಡ ಬಾರ್ಬಡೋಸ್ನಲ್ಲಿ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುತ್ತದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಕಳೆದ ಫೆಬ್ರವರಿಯಲ್ಲಿ ರಾಜ್ಕೋಟ್ನಲ್ಲಿ ಹೇಳಿದ್ದ ಮಾತು ನಿಜವಾಗಿದೆ.
2023ರ ಏಕದಿನ ವಿಶ್ವಕಪ್ ಫೈನಲ್ ಸೋಲಿನ ಬಳಿಕ ನಿರಾಸೆಯಲ್ಲಿದ್ದ ಭಾರತ ತಂಡಕ್ಕೆ ಸ್ಫೂರ್ತಿ ತುಂಬುವ ಸಲುವಾಗಿ ಜಯ್ ಷಾ, ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ಗೆ ಮುನ್ನ ರಾಜ್ಕೋಟ್ ಸ್ಟೇಡಿಯಂಗೆ ನಿರಂಜನ್ ಷಾ ಹೆಸರಿಡುವ ಸಮಾರಂಭದಲ್ಲಿ ಈ ಮಾತು ಹೇಳಿದ್ದರು. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಹಾರ್ದಿಕ್ ಪಾಂಡ್ಯ ಅಲ್ಲ, ರೋಹಿತ್ ಶರ್ಮ ಅವರೇ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ ಎಂಬುದನ್ನೂ ಸ್ಪಷ್ಟಪಡಿಸಿದ್ದರು.
ಶನಿವಾರ ರೋಹಿತ್ ಶರ್ಮ ಬಾರ್ಬಡೋಸ್ನಲ್ಲಿ ಜಯ್ ಷಾ ಕೈಯಿಂದಲೇ ವಿಶ್ವಕಪ್ ಟ್ರೋಫಿಯನ್ನು ಸ್ವೀಕರಿಸಿದ್ದು ವಿಶೇಷವಾಗಿತ್ತು.
ಟಿ20 ವಿಶ್ವಕಪ್ ವಿಜೇತ ಭಾರತ ತಂಡಕ್ಕೆ ಬಂಪರ್ ಬಹುಮಾನ ಘೋಷಿಸಿದ ಬಿಸಿಸಿಐ!