ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯು 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನಕ್ಕಾಗಿ ಲೇಖಕರು, ಸಂಪಾದಕರು ಮತ್ತು ಪ್ರಕಾಶಕರುಗಳಿಂದ ಕೃತಿಗಳನ್ನು ಆಹ್ವಾನಿಸಿದೆ.
ಪ್ರಥಮ ಅವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತು ಪಡಿಸಿ) ಕನಿಷ್ಟ 150 ಪುಟುಗಳಿಗೂ ಮೇಲ್ಪಟ್ಟಿರುವ ಜಾನಪದ ಗದ್ಯ, ಜನಪದ ಪದ್ಯ, ಜನಪದ ವಿಚಾರ-ವಿಮರ್ಶೆಸಂಶೋಧನೆ ಮತ್ತು ಜನಪದ ಸಂಕೀರ್ಣ ಸಂಬಂಧಸಿದ ಕೃತಿಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವುದು.
ಆಸಕ್ತ ಲೇಖಕರು, ಸಂಪಾದಕರು ಮತ್ತು ಪ್ರಕಾಶಕರು ನಾಲ್ಕು ಕೃತಿಗಳನ್ನು ದ್ವಿಪ್ರತಿಯೊಂದಿಗೆ ಜು.20ರೊಳಗೆ ಕಳುಹಿಸಬೇಕು. ವಿಳಾಸ: ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, 2ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002. ವಿವರಗಳಿಗೆ ದೂ: 080-22215509 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟ್ರಾರ್ ತಿಳಿಸಿದ್ದಾರೆ.