More

    ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕಾರ: ಕಾಗೇರಿ ವಿರುದ್ಧ ಆಕ್ರೋಶ

    ಬೆಂಗಳೂರು: ಲೋಕಸಭಾ ಸದಸ್ಯರಾಗಿ ಚುನಾಯಿತರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಮತ್ತು ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕರ್ನಾಟಕ ವಿಕಾಸ ರಂಗ ವಿರೋಧ ವ್ಯಕ್ತಪಡಿಸಿದೆ.


    ಕರುನಾಡಿನ ಮತದಾರರಿಂದ ಆಯ್ಕೆಯಾದ ರಾಜ್ಯದ ಎಲ್ಲ ಸಂಸದರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇವರೆಲ್ಲರಿಗೂ ಅಭಿನಂದನೆಗಳು. ಆದರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕನ್ನಡವನ್ನು ಕಡೆಗಣಿಸಿ, ಸಂಸ್ಕೃತದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಕ್ಕಾಗಿ ಅವರಿಗೆ ಧಿಕ್ಕಾರ ಹೇಳುತ್ತೇವೆ ಎಂದು ಕರ್ನಾಟಕ ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts