ಕೊಳ್ಳೇಗಾಲ: ಶೈಕ್ಷಣಿಕ ಹಂತದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಪ್ರಮುಖ ಘಟ್ಟ ಎಂದು ವಿಶ್ವಚೇತನ ವಿದ್ಯಾಸಂಸ್ಥೆಯ ಸಂಸ್ಥಾಪಕಿ ಪ್ರೇಮಲತಾ ಕೃಷ್ಣಸ್ವಾಮಿ ಹೇಳಿದರು.
ಪಟ್ಟಣದ ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ ಆವರಣದಲ್ಲಿ ಸಂಸ್ಥೆಯ ಪ್ರೌಢಶಾಲೆ, ಕಾಲೇಜು ಹಾಗೂ ಸ್ವಾಮಿ ವಿವೇಕನಾಂದ ಐಟಿಐ ಕಾಲೇಜಿನ ಪ್ರಥಮ ವರ್ಷದ ಮಕ್ಕಳಿಗೆ ಆಯೋಜಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು. ವಿಶ್ವಚೇತನ ಸಮೂಹ ವಿದ್ಯಾಸಂಸ್ಥೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ತೆರೆಯಲಾಗಿದ್ದು, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಂಸ್ಥೆಗೆ ಉತ್ತಮ ಫಲಿತಾಂಶ ಬಂದಿದೆ. ಇದರ ಪರಿಣಾಮ ಮಕ್ಕಳ ದಾಖಲಾತಿ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಸಂತೋಷದ ವಿಚಾರ ಎಂದರು.
ಶಿಕ್ಷಣ ಕನಸನ್ನು ನನಸು ಮಾಡುವ ಸಾಧನವಾಗಿದ್ದು, ಮಕ್ಕಳು ಓದಿಗೆ ಹೆಚ್ಚು ಒತ್ತು ನೀಡಬೇಕು. ಪ್ರಾರಂಭದ ಉತ್ಸಾಹ, ಆಸಕ್ತಿಯನ್ನು ಕೊನೆಯವರೆಗೂ ಉಳಿಸಿಕೊಂಡು ಚೆನ್ನಾಗಿ ಓದಿ ಶಾಲೆ, ಕಾಲೇಜು ಹಾಗೂ ಪಾಲಕರಿಗೆ ಹೆಸರು ತರಬೇಕೆಂದು ಕಿವಿಮಾತು ಹೇಳಿದರು.
ವಿವೇಕಾನಂದ ಐಟಿಐ ಕಾಲೇಜಿನ ಪ್ರಾಂಶುಪಾಲ ಜಗದೀಶ್, ವಿಶ್ವ ಚೇತನ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಎಸ್.ಭಾಸ್ಕರನ್, ಬಸವಲಿಂಗಪ್ಪ ಪ್ರೌಢಶಾಲೆ ಮುಖ್ಯ ಶಿಕ್ಷಕ ಅಕ್ಬರ್ ಇತರರಿದ್ದರು.