More

    ವಾರ್ನಿಂಗ್ ನಾನ್ ಕೇಳ್ತೀನೇನ್ರೀ.. ಡಿಕೆಶಿ ಎಚ್ಚರಿಕೆಗೆ ಕೆ.ಎನ್. ರಾಜಣ್ಣ ಖಡಕ್ ಪ್ರತಿಕ್ರಿಯೆ

    ಬೆಂಗಳೂರು: ಹೆಚ್ಚುವರಿ ಉಪಮುಖ್ಯಮಂತ್ರಿ ಕೇಳಬಾರದೇ ನಾವು? ಕೇಳಿದರೆ ತಪ್ಪಾಗುತ್ತದೆಯೇ? ವಾರ್ನಿಂಗ್ ನಾನ್ ಕೇಳ್ತೀನೇನ್ರೀ, ರಾಜಣ್ಣ ರಾಜಣ್ಣಾನೇ. ಬಾಯಿಗೆ ಬೀಗ ಎಲ್ಲಾರು ಹಾಕಿಕೊಳ್ಳಬೇಕು. ಎಲ್ಲರು ಸುಮ್ಮನೆ ಇದ್ದರೆ ನಾನೂ ಸುಮ್ಮನೆ ಇರುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದ್ದಾರೆ.

    ಇದನ್ನೂ ಓದಿ: ಮಕ್ಕಳಿಗೆ ಪುಸ್ತಕ ಅಭಿರುಚಿ ಬೆಳೆಸಬೇಕಿದೆ: ಐಎಎಸ್​ ಅಧಿಕಾರಿ ವಿದ್ಯಾ ಹೇಳಿಕೆ

    ಸಿಎಂ, ಡಿಸಿಎಂ ವಿಚಾರವಾಗಿ ಧ್ವನಿ ಎತ್ತಿದ್ದರೆ, ಪಕ್ಷದ ಶಿಸ್ತು ಕಾಪಾಡಲು ನೊಟೀಸ್ ನೀಡಬೇಕಾಗುತ್ತದೆ ಎನ್ನುತ್ತಾರೆ ಡಿಕೆಶಿ. “ನೋಟೀಸ್ ಕೊಡುತ್ತಾರಾ? ಕೊಡಲಿ. ಕೊಟ್ಟಿದ ಬಳಿಕ ಮಾತಾಡುತ್ತೇನೆ.‌ ವಿವಾದವಾಗಬಾರದು ಅಂತಾ ಹೇಳಿರುತ್ತಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಅಂತ ಹೇಳಿದರೆ ಕೇಳಿಕೊಂಡು ಸುಮ್ಮನೆ ಇರಬೇಕಾ? ಶಾಮನೂರು ಶಿವಶಂಕರಪ್ಪ ಮಾಡಿ ಅಂತಾ ಅವರ ಸ್ವಾಮಿಗಳು ಕೇಳುತ್ತಾರೆ. ಸತೀಶ್ ಜಾರಕಿಹೊಳಿ ಸಿಎಂ ಮಾಡಿ ಅಂತ ಅವರ ಸ್ವಾಮೀಜಿಗಳು ಹೇಳುತ್ತಾರೆ. ಸ್ವಾಮೀಜಿಗಳು ಹೇಳೋದನ್ನು ಕೇಳೋದಕ್ಕೆ ಆಗುತ್ತಾ?” ಎಂದಿದ್ದಾರೆ.

    “ಚಂದ್ರಶೇಖರ ಸ್ವಾಮೀಜಿ ಹೇಳಿರೋದು ಪ್ರಜಾಪ್ರಭುತ್ವಕ್ಕೆ ಅವಮಾನ. ನಾನು ಸಿಎಂ ಪರವಾಗಿ ಅಂತಲ್ಲ. ಪ್ರಜಾಪ್ರಭುತ್ವ ಪರವಾಗಿ ಇದ್ದೀನಿ. ನಾನು ಹಗರಣ ಮಾಡಿದ್ದರೆ ತನಿಖೆ ಮಾಡಲಿ. ಬಡವರ ಪರ ಸಿದ್ದರಾಮಯ್ಯ ಕೆಲಸ ಮಾಡುತ್ತಾರೆ. ಅದಕ್ಕೆ ಅವರ ಜತೆ ನಾವಿದ್ದೇವೆ. ಸ್ವಾಮೀಜಿಗಳದ್ದು ಅವರ ಜಾಗ ಅವರದ್ದು. ಎಂಪಿಯಾಗಿ ಡಿ.ಕೆ. ಸುರೇಶ್ ಪರಿಣಾಮಕಾರಿಯಾಗಿ ಕೆಲಸ ಮಾಡಿರೋರಲ್ಲಿ ಪ್ರಥಮ. ಆದರೂ ಯಾರು ಸೋಲಿಸಿದ್ದು, ಇವರೆಲ್ಲಾ ಸ್ವಾಮೀಜಿಗಳು ಒಂದಾಗಿ ಸೋಲಿಸಿದ್ದರು” ಎಂದು ಹೇಳಿದರು.

    ಇದನ್ನೂ ಓದಿ: ಪ್ರಧಾನಿ ಮೋದಿಯವರನ್ನು ಮದುವೆಗೆ ಆಹ್ವಾನಿಸಿದ ‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್​ ಕುಮಾರ್

    “ದೇವೇಗೌಡರು ಹುಟ್ಟುಹಾಕಿದ ಸ್ವಾಮೀಜಿಗಳು ಇವರು. ಯಾರನ್ನು ಸಿಎಂ ಮಾಡಬೇಕು ಅಂತ ಶಾಸಕರು, ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸ್ವಾಮೀಜಿಗಳು ಹೇಳಿದಂತೆ ಮಾಡಲು ಸಾಧ್ಯವಿಲ್ಲ” ಎಂದರು.

    ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್​ರನ್ನು ಕಪಿಲ್ ದೇವ್​​ಗೆ ಹೋಲಿಸಿದ ಮಾಜಿ ಕ್ರಿಕೆಟಿಗ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts