More

    ಮನೆ ಬಾಗಿಲಿಗೆ ಸೌಲಭ್ಯ ತಲುಪಿಸುವ ಉದ್ದೇಶ

    ಜನಸ್ಪಂದನಾ ಕಾರ್ಯಕ್ರಮದಲ್ಲಿ ಶಾಸಕ ಶರತ್‌ಬಚ್ಚೇಗೌಡ ಹೇಳಿಕೆ


    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಸರ್ಕಾರದ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಹೊಸಕೋಟೆ ಶಾಸಕ ಮತ್ತು ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರತ್ ಬಚ್ಚೇಗೌಡ ಹೇಳಿದರು.
    ಹೊಸಕೋಟೆ ತಾಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿಯ ಸಂಯುಕ್ತ ಆಶ್ರಯದಲ್ಲಿ ಹೊಸಕೋಟೆ ತಾಲೂಕು ಸೂಲಿಬೆಲೆಯ ’ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ’ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
    ಸಾರ್ವಜನಿಕರು ಸಮಸ್ಯೆಗಳನ್ನು ಹೊತ್ತು ಪ್ರತಿನಿತ್ಯ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಹಾಗೂ ಜನರ ಬಳಿಗೆ ಸರ್ಕಾರವನ್ನು ಕಳುಹಿಸಿ ಪ್ರಜೆಗಳ ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಸ್ಥಳದಲ್ಲಿಯೇ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದು ಜನಸ್ಪಂದನ ಕಾರ್ಯಕ್ರಮದ ಉದ್ದೇಶವಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದೇ ರೀತಿ ಹೊಸಕೋಟೆ ಭಾಗದಲ್ಲಿಯೂ ಕಾರ್ಯಕ್ರಮ ಆಯೋಜಸಿದ್ದು ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
    ಮಧ್ಯವರ್ತಿಗಳ ಹಾವಳಿ ಇಲ್ಲ: ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ, ಯುವ ನಿಧಿ ಯೋಜನೆಗಳಿಂದ ಯಾವುದೇ ಮಧ್ಯವರ್ತಿಗಳ ಕಮಿಷನ್ ಹಾವಳಿ ಇಲ್ಲದೆ ನೇರವಾಗಿ ಮನೆ ಮನೆಗೆ ಸೌಲಭ್ಯ ತಲುಪುತ್ತಿದೆ ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಶಾಸಕರು ಹೇಳಿದರು. ರಾಜ್ಯ ಮಟ್ಟದಲ್ಲಿ ಹೇಗೆ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದೆಯೋ ಹಾಗೆ ತಾಲೂಕು ಮಟ್ಟದಲ್ಲಿ ನಡೆಯುತ್ತಿದೆ. ಪ್ರಜೆಗಳ ಸೇವೆ ಮಾಡುವ ದೃಷ್ಟಿಯಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕ್ರಮದ ಜತೆಗೆ ಸಾಗುವಳಿ ಚೀಟಿ ವಿತರಣೆ, ಪಿಂಚಣಿ ಸೌಲಭ್ಯ, ಅಂಗವಿಕಲರ ಸಾಮಾಗ್ರಿಗಳನ್ನು ಸಹ ವಿತರಣೆ ಮಾಡಲಾಗುತ್ತಿದೆ. ಕಂದಾಯ ಇಲಾಖೆಯ ಒತ್ತುವರಿ ಸಮಸ್ಯೆ, ಖಾತೆ ಸಮಸ್ಯೆ, ಸಾಗುವಳಿ ಚೀಟಿ ಮುಂತಾದ ಹಲವು ಸಮಸ್ಯೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಬಗೆಹರಿಸಲಾಗುವುದು ಎಂದು ಶಾಸಕರು ಹೇಳಿದರು.
    ಮನೆ ಬಳಿಗೆ ಅಧಿಕಾರಿಗಳೇ ಬರುತ್ತಾರೆ:
    ಜನರು ಅಧಿಕಾರಿಗಳನ್ನು ಹುಡುಕಿಕೊಂಡು ಹೋಗುವ ಬದಲಾಗಿ ಅಧಿಕಾರಿಗಳೇ ಜನರ ಬಳಿ ಬಂದು ಸಮಸ್ಯೆ ಆಲಿಸುತ್ತಾರೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು. ಸಾರ್ವಜನಿಕರು ಸಲ್ಲಿಸಿದ ಅಹವಾಲುಗಳನ್ನು ನಿಗದಿತ ಕಾಲ ಮಿತಿಯೊಳಗೆ ವಿಲೇವಾರಿ ಮಾಡಲಾಗುವುದು. ಪ್ರತಿ ತಿಂಗಳು ತಾಲೂಕು ಹೋಬಳಿ ಮಟ್ಟದಲ್ಲಿ ಜನ ಸಂಪರ್ಕ ಸಭೆ ಮಾಡಲಾಗುವುದು. ಜನಸಂಪರ್ಕ ಸಭೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts