ಕೋಟ: ಮಕ್ಕಳು ಶಾಲಾ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಅವರಲ್ಲಿರುವ ಪ್ರತಿಭೆಗಳು ಪರಿಪಕ್ವವಾಗುತ್ತವೆ. ವಾರಾಂತ್ಯದಲ್ಲಿ ನಡೆಯಲಿರುವ ಸಂಗೀತ ತರಗತಿಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್ ಹೇಳಿದರು.
ಕೋಟದ ಡಾ.ಶಿವರಾಮ ಕಾರಂತ ಅನೌಪಚಾರಿಕ ಕೇಂದ್ರ ವತಿಯಿಂದ ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಸಂಗೀತ ತರಗತಿ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಂಗೀತ ಶಿಕ್ಷಕಿ ಭಾಗೇಶ್ವರಿ ಮಯ್ಯ, ಪಾಲಕರು ಉಪಸ್ಥಿತರಿದ್ದರು.
ಪಠ್ಯೇತರ ಚಟುವಟಿಕೆಗಳಿಂದ ಪಕ್ವತೆ : ಸಂಗೀತ ತರಗತಿ ಉದ್ಘಾಟಿಸಿ ಸುಶೀಲಾ ಅನಿಸಿಕೆ
ಡಾ.ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ನಡೆಯುವ ಸಂಗೀತ ತರಗತಿಯನ್ನು ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಶೀಲಾ ಸೋಮಶೇಖರ್ ಉದ್ಘಾಟಿಸಿದರು