ಸಮಾಜದೊಂದಿಗೆ ಬೆರೆತರೆ ಜೀವನಾನುಭವ : ಲಕ್ಷ್ಮೀಕಾಂತ್ ಅಭಿಪ್ರಾಯ

ವಿಜಯವಾಣಿ ಸುದ್ದಿಜಾಲ ಪುತ್ತೂರು ಗ್ರಾಮಾಂತರ ಯಾವುದೇ ಕಾರ್ಯದ ಯಶಸ್ವಿ ಅನುಷ್ಠಾನಕ್ಕೆ ಆಸಕ್ತಿ ಮತ್ತು ಅನುಭವ ಅತ್ಯಗತ್ಯ. ನಾಲ್ಕು ಗೋಡೆಗಳ ಮಧ್ಯೆ ಪಡೆಯುವ ಶಿಕ್ಷಣ ಅಂಕಗಳಿಗೆ ಮಾತ್ರ ಸೀಮಿತವಾಗುತ್ತದೆ. ಜೀವನದ ಜಂಜಾಟಗಳ ಬಗ್ಗೆ ಅರಿವಾಗಬೇಕಾದರೆ ಸಮಾಜದೊಂದಿಗೆ ಬೆರೆಯಬೇಕು ಎಂದು ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಲಕ್ಷ್ಮೀಕಾಂತ ರೈ ಅನಿಕೂಟೇಲ್ ಹೇಳಿದರು. ಬೆಟ್ಟಂಪಾಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಅಂತಿಮ ಮೌಲ್ಯಮಾಪನದ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಗತಿಪರ ಕೃಷಿಕ ಶ್ರೀನಿವಾಸ ಭಟ್ ಚಂದುಕೂಡ್ಲು … Continue reading ಸಮಾಜದೊಂದಿಗೆ ಬೆರೆತರೆ ಜೀವನಾನುಭವ : ಲಕ್ಷ್ಮೀಕಾಂತ್ ಅಭಿಪ್ರಾಯ