ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಮಂಗಳವಾರ) ಮಾಜಿ ಉಪ ರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರನ್ನು ಭೇಟಿ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಕುರಿತು ಮಾತನಾಡಿದರು.
ಇದನ್ನೂ ಓದಿ: ಜೂ.30ಕ್ಕೆ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ ಉದ್ಘಾಟನೆ!
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ವೆಂಕಯ್ಯನಾಯ್ಡು ಅವರನ್ನು ಇಂದು ಭೇಟಿ ಮಾಡಿದ್ದೇನೆ. ನನಗೆ ಅವರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತ್ತು. ಭಾರತದ ಪ್ರಗತಿಗಾಗಿ ಅವರ ಬುದ್ಧಿವಂತಿಕೆ ಮತ್ತು ಉತ್ಸಾಹದ ಬಗ್ಗೆ ಯಾವಾಗಲೂ ನಾನು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದೆ” ಎಂದು ಪೋಸ್ಟ್ ಮಾಡಿದ್ದಾರೆ.
Met Shri @MVenkaiahNaidu Garu. I have had the opportunity to work with him for decades and have always admired his wisdom and passion for India's progress.
Venkaiah Garu conveyed his best wishes for our third term. pic.twitter.com/XDoEGCZfL2
— Narendra Modi (@narendramodi) June 25, 2024
ಈ ಕುರಿತು ಮಾಜಿ ಉಪ ರಾಷ್ಟ್ರಪತಿ ಅವರು, ವೆಂಕಯ್ಯ ನಾಯ್ಡು ಅವರು ಕೂಡ ಎಕ್ಸ್ನಲ್ಲಿ ಬರೆದು ಪೋಸ್ಟ್ ಮಾಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿದರು. ಭಾರತದ ಪ್ರಧಾನ ಮಂತ್ರಿಯಾಗಿ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ನಾನು ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದೇನೆ. ನಮ್ಮ ಮಾತುಕತೆಯಲ್ಲಿ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳ ಬಗ್ಗೆ ನಮ್ಮ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದೇವೆ” ಎಂದು ತಮ್ಮ ಪೋಸ್ಟ್ನಲ್ಲಿ ಭೇಟಿಯ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Prime Minister Shri Narendra Bhai Modi Ji called on me at my residence No. Thyagaraja Marg, in New Delhi.
I conveyed my heartiest congratulations to Shri Narendra Bhai Modi Ji on being sworn in for his third term as Prime Minister of India. In our interaction, we exchanged our… pic.twitter.com/tTc7HqIaZA
— M Venkaiah Naidu (@MVenkaiahNaidu) June 25, 2024
ವೆಂಕಯ್ಯ ನಾಯ್ಡು ಅವರು ಭಾರತದ 13ನೇ ಉಪರಾಷ್ಟ್ರಪತಿಯಾಗಿ ಆಗಸ್ಟ್ 11, 2017ರಿಂದ ಆಗಸ್ಟ್ 10, 2022ರವರೆಗೆ ಅಧಿಕಾರದಲ್ಲಿದ್ದರು.