More

    ಮೋಕ್ಷ ಪ್ರಾಪ್ತಿಯೇ ಜೀವನದ ಗುರಿಯಾಗಲಿ : ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆಶೀರ್ವಚನ

    ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

    ಜಪ, ತಪ, ಧ್ಯಾನ, ವ್ರತ ನಿಯಮಗಳ ಪಾಲನೆ ಮೊದಲಾದ ಸತ್ಕರ್ಮಗಳಿಂದ ಆತ್ಮನಿಗಂಟಿದ ಸಕಲ ಪಾಪಕರ್ಮಗಳ ಕೊಳೆಯನ್ನು ಕಳೆದಾಗ ಆತ್ಮನೇ ಪರಮಾತ್ಮನಾಗುತ್ತಾನೆ. ಮೋಕ್ಷ ಪ್ರಾಪ್ತಿಯೇ ಜೀವನದ ಪರಮ ಗುರಿಯಾಗಬೇಕು ಎಂದು ಮೂಡುಬಿದಿರೆ ಜೈನಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.

    ಗುರುವಾರ ಪೆರಿಂಜೆ ಭಗವಾನ್ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ಮಂಗಲ ಪ್ರವಚನ ನೀಡಿ, ಪರಿಶುದ್ಧ ಮನಸ್ಸಿನಿಂದ ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಸದಾ ದೇವರ ಧ್ಯಾನ ಮಾಡಬೇಕು. ಆಗ ಜೀವನ ಮಂಗಳಕರವಾಗಿರುತ್ತದೆ. ಹೆಚ್ಚು ಚಿಂತೆ ಮಾಡಿದರೆ ಬೇಗನೆ ಚಿತೆಗೆ ಹೋಗಬೇಕಾಗುತ್ತದೆ ಎಂದರು.

    ಇತ್ತೀಚೆಗೆ ನಿಧನರಾದ ಪೆರಿಂಜೆ ಮಾಗಣೆ ಗುತ್ತು ಕರಿಮಣೇಲು ಕೆ. ವಿನಯಕುಮಾರ್ ಸೇಮಿತರಿಗೆ ಚಿರಶಾಂತಿ ಕೋರಿ 9 ಬಾರಿ ಸಾಮೂಹಿಕ ಪಂಚ ನಮಸ್ಕಾರ ಮಂತ್ರ ಪಠಣ ಮಾಡಲಾಯಿತು.ಭಗವಾನ್ ಪುಷ್ಪದಂತ ಸ್ವಾಮಿಗೆ 216 ಕಲಶ ಅಭಿಷೇಕ, ಭಗವಾನ್ ಆದಿನಾಥ ಸ್ವಾಮಿಗೆ ಪಂಚಾಮೃತ ಅಭಿಷೇಕ, ಬ್ರಹ್ಮಯಕ್ಷ ದೇವರಿಗೆ ಮತ್ತು ಪದ್ಮಾವತಿ ಅಮ್ಮನವರಿಗೆ ವಿಶೇಷ ಅಲಂಕಾರ ಪೂಜೆ ನಡೆಸಲಾಯಿತು.

    ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಡಿ. ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಪಿ. ಜಯರಾಜ ಕಂಬಳಿ, ಪೆರಿಂಜೆಗುತ್ತು ಹಾಗೂ ಊರ-ಪರವೂರ ಶ್ರಾವಕರು, ಶ್ರಾವಕಿಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts