More

    ರಾಜಹಂಸ-ಐರಾವತ ಮುಖಾಮುಖಿ ಡಿಕ್ಕಿ : ಅಪಘಾತ ತಪ್ಪಿಸುವ ಯತ್ನದಲ್ಲಿ ಚರಂಡಿಗೆ ಬಿದ್ದ ಕಂಟೈನರ್

    ನೆಲ್ಯಾಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಶನಿವಾರ ಮಧ್ಯಾಹ್ನ ಬಸ್ಸುಗಳ ನಡುವೆ ಸರಣಿ ಅಪಘಾತ ಉಂಟಾಗಿದ್ದು, ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಹೋಗುವ ಐರಾವತ ಬಸ್ ಹಾಗೂ ಬೆಂಗಳೂರಿನಿಂದ ಮಂಗಳೂರಿಗೆ ಬರುವ ರಾಜಹಂಸ ಬಸ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಐರಾವತ ಬಸ್‌ನ ಹಿಂದೆ ಇದ್ದ ಕಂಟೈನರ್ ಅಫಘಾತ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದಿದೆ. ಅಪಘಾತದಿಂದಾಗಿ 2 ಗಂಟೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪರಶುರಾಮ ಕ್ರೇನ್ ತಂಡದ ಸದಸ್ಯರು ಬಸ್ ತೆರವುಗೊಳಿಸಲು ಸಹಕರಿಸಿದರು. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು, ಸಂಚಾರ ಠಾಣಾ ಪೊಲೀಸರು ಆಗಮಿಸಿ ಪರಿಶೀಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts