More

    ವಿಹಾರಕ್ಕೆಂದು ಬಂದಾತ ಸಮುದ್ರಪಾಲು: ಸ್ಥಳೀಯರಿಂದ ಓರ್ವನ ರಕ್ಷಣೆ ; ಪತ್ತೆಗೆ ಕಾರ್ಯಾಚರಣೆ

    ಕೋಟ: ಕುಂದಾಪುರ ತಾಲೂಕಿನ ಬೀಜಾಡಿ ಬೀಚ್‌ಗೆ ಸ್ನೇಹಿತನ ಜತೆ ವಿಹಾರಕ್ಕೆಂದು ಬಂದಿದ್ದ ತುಮಕೂರು ಜಿಲ್ಲೆ ತಿಪಟೂರಿನ ಯೋಗೀಶ್(23) ಎಂಬುವರು ಸಮುದ್ರಪಾಲಾಗಿದ್ದಾರೆ. ಅವರೊಂದಿಗೆ ಬಂದಿದ್ದ ಅದೇ ಜಿಲ್ಲೆಯ ಸಂದೀಪ್(24) ಎಂಬುವರನ್ನು ಸ್ಥಳೀಯರು ರಕ್ಷಿಸಿದ್ದಾರೆ.

    ಯೋಗೀಶ್ ಹಾಗೂ ಸಂದೀಪ್ ಸ್ನೇಹಿತ ಬೀಜಾಡಿಯ ವಿನಯ್ ಅವರ ಅಕ್ಕನ ಮದುವೆಗೆಂದು ಬುಧವಾರ ಬಂದಿದ್ದರು. ಸಂಜೆ ವೇಳೆ ಬೀಜಾಡಿ ಬೀಚ್‌ಗೆ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಯೋಗೀಶ್ ನೀರಿಗಿಳಿದಿದ್ದಾರೆ. ಸಂಜೆ ಮಳೆ ಇದ್ದುದಲ್ಲದೆ, ಕಡಲ ಅಲೆಗಳ ಅಬ್ಬರ, ಗಾಳಿಯ ವೇಗವೂ ತುಸು ಜೋರಾಗಿಯೇ ಇತ್ತು. ಅಲೆಯಬ್ಬರಕ್ಕೆ ಯೋಗೀಶ್ ಕೊಚ್ಚಿಕೊಂಡು ಹೋಗುತ್ತಿದ್ದುದನ್ನು ಕಂಡ ಜತೆಗಿದ್ದ ಸಂದೀಪ್ ಯೋಗೀಶ್‌ನನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಅವರೂ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಸ್ಥಳೀಯರು ರಕ್ಷಿಸಿದ್ದಾರೆ. ಆದರೆ ಯೋಗೀಶ್ ಸಮುದ್ರದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದಾರೆ. ಕುಂದಾಪುರ ವೃತ್ತ ನಿರೀಕ್ಷಕ ನಂದಕುಮಾರ್, ನಗರ ಠಾಣೆ ಎಸ್‌ಐ ಪ್ರಸಾದ್ ಕುಮಾರ್, ಪೊಲೀಸ್ ಸಿಬ್ಬಂದಿ ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಭೇಟಿ ನೀಡಿ ಯುವಕನ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts