ಬೀದರ್: 18ನೇ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಇಂದು (ಜೂನ್ 04) ಪ್ರಕಟಗೊಂಡಿದ್ದು, ಲೆಕ್ಕಾಚಾರಗಳು ತಲೆಕೆಳಗಾದಂತೆ ಕಾಣುತ್ತಿವೆ. ಬೀದರ್ನಲ್ಲಿ ಲೋಕಸಭೆ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಗೆಲುವು ನಿರೀಕ್ಷಿಸಿದ್ದ ಕೇಂದ್ರ ಸಚಿವ ಭಗವಂತ್ ಖುಬಾಗೆ ದೇಶದ ಅತ್ಯಂತ ಕಿರಿಯ ಅಭ್ಯರ್ಥಿ ಸಾಗರ್ ಖಂಡ್ರಗೆ ಬ್ರೇಕ್ ಹಾಕಿದ್ದು, ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ರಥಿಯಾಗಿ ಕಣಕ್ಕಿಳಿದಿದ್ದ ಸಾಗರ್ ಖಂಡ್ರೆ 4,91,839 ಮತಗಳನ್ನು ಪಡೆದಿದ್ದು, ಬಿಜೆಪಪಿ ಅಭ್ಯರ್ಥಿ ಭಗವಂತ್ ಖೂಬಾ ವಿರುದ್ಧ 1,06,277 ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ. ಈ ಮೂಲಕ ದೇಶದ ಅತ್ಯಂತ ಕಿರಿಯ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಸಾಗರ್ ಖಂಡ್ರೆ ಗೆಲುವು ದಾಖಲಿಸುವತ್ತ ದಾಪುಗಾಲಿಟ್ಟಿದ್ದಾರೆ.
ಲೋಕಸಭೆ ಚುನಾವಣೆಗೂ ಮುನ್ನ ಭಗವಂತ್ ಖೂಬಾ ಅವರಿಗೆ ಟಿಕೆಟ್ ನೀಡದಂತೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಅವರಿಗೆ ಟಿಕೆಟ್ ನೀಡಿತ್ತು. ಆಂತರಿಕ ಭಿನ್ನಾಭಿಪ್ರಾಯದಿಂದ ಖೂಬಾ ಅವರು ಸೋಲು ಕಂಡಿರಬಹುದು ಎಂದು ಹೇಳಲಾಗುತ್ತಿದೆ.