More

    ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನ: ನಟ ಶಿವರಾಜ್​ಕುಮಾರ್​ ವಿರುದ್ಧ ಪ್ರಶಾಂತ್​ ಸಂಬರಗಿ ಆಕ್ರೋಶ

    ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಎ2 ಆರೋಪಿ ನಟ ದರ್ಶನ್​ ವಿರುದ್ಧ ಧ್ವನಿ ಎತ್ತದೇ ಮೌನವಹಿಸಿರುವುದಕ್ಕೆ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್​ಬಾಸ್​ ಸೀಸನ್​ 8ರ ಸ್ಪರ್ಧಿ ಪ್ರಶಾಂತ್​ ಸಂಬರಗಿ ಆಕ್ರೋಶ ಹೊರಹಾಕಿದ್ದಾರೆ.

    ನ್ಯಾಷನಲ್​ ಟಿವಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್​ ಸಂಬರಗಿ, ದಯವಿಟ್ಟು ಚಿತ್ರರಂಗದವರು ದರ್ಶನ್​ ಪ್ರಕರಣದ ಬಗ್ಗೆ ಧ್ವನಿ ಎತ್ತಿ. ಅದರಲ್ಲೂ ಶಿವರಾಜ್​ಕುಮಾರ್​ ಅವರಲ್ಲಿ ನಾನು ಕೇಳುವುದೇನೆಂದರೆ, ನಿಮ್ಮ ಮೌನ ಇದಕ್ಕೆ ಸಮ್ಮತಿ ಸೂಚಿಸುತ್ತದೆ. ನೀವು ಈವರೆಗೂ ಒಂದೇ ಒಂದು ಮಾತನಾಡದೇ ಇರುವುದು ದರ್ಶನ್​ ಮಾಡಿರುವ ಕರ್ಮಕಾಂಡಕ್ಕೆ ನೀವು ಸಮ್ಮತಿ ಸೂಚಿಸಿದಂತಾಗುತ್ತದೆ ಎಂದರು.

    ದರ್ಶನ್​ ಮಾಡಿರುವ ಅಟ್ಟಹಾಸಕ್ಕೆ ಮೊದಲು ನೀವು ಬಂದು ಮಾತನಾಡಬೇಕಿದೆ. ಆ ಧೈರ್ಯ ನನ್ನಲ್ಲಿ ಇರಬೇಕಾದರೆ ನೀವು ಕೂಡ ಧೈರ್ಯ ತೋರಬೇಕಿದೆ. ಅನೇಕ ಸಣ್ಣ ಸಣ್ಣ ವಿಚಾರಗಳನ್ನು ಮಾತನಾಡುವ ನೀವು ಈ ವಿಚಾರದಲ್ಲಿ ಮೌನವಾಗಿರುವುದೇಕೆ? ನಿಮ್ಮ ಈ ಮೌನಂ ಸಮ್ಮತಿ ಇದೆಯಲ್ಲ ಅದು ಎಲ್ಲೋ ಒಂದು ಕಡೆ ನೀವು ದುಷ್ಟರನ್ನು, ರೌಡಿಗಳನ್ನು ಬೆಳೆಸುತ್ತಿದ್ದೀರಾ ಅಂತ ನೇರ ಆಪಾದನೆ ಮಾಡುತ್ತೇನೆ ಎಂದು ಪ್ರಶಾಂತ್​ ಸಂಬರಗಿ ಆಕ್ರೋಶ ಹೊರಹಾಕಿದರು.

    ಏನಿದು ಪ್ರಕರಣ?
    ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

    ಒಂದು ಕಾಲದ ಕುಚಿಕು ಗೆಳೆಯನ ಪತ್ನಿಗೆ ಮಧ್ಯರಾತ್ರಿಯಲ್ಲಿ ವಾಯ್ಸ್​ ಮೆಸೇಜ್ ಕಳುಹಿಸಿದ್ದ! ದಚ್ಚು​ ವಿರುದ್ಧ ಗಂಭೀರ ಆರೋಪ

    ದರ್ಶನ್ ಅಭಿಮಾನಿಗಳಿಗೆ ಅಣ್ಣ ಆದ್ರೂ ಪವಿತ್ರಾಗೌಡ ಅತ್ತಿಗೆ ಅಲ್ಲ; ದಾಖಲೆಯಲ್ಲಿ ರಿವೀಲಾಯ್ತು ಡಿ ಬಾಸ್​​​ ಲೈಫ್​​ ಸೀಕ್ರೆಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts