ಬೆಂಗಳೂರು: 2023ರಲ್ಲಿ ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಿಎಂ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
2023ರ ಸೆಪ್ಟೆಂಬರ್ನಲ್ಲಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿದ್ದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ್ದರು. ಅವರ ಹೇಳಿಕೆಯೂ ದೇಶಾದ್ಯಂತ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿತ್ತು. ಇದರ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಪರಮೇಶ್ ಎಂಬುವವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಉದಯನಿಧಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
ಇದನ್ನೂ ಓದಿ: VIDEO| ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಕ್ಕಿಲ್ಲ ಎಂದು ಕಿರಿಕ್; ಕ್ಷಣಾರ್ಧದಲ್ಲೇ ರಣರಂಗವಾದ ಮದುವೆ ಮನೆ
ಸಚಿವ ಉದಯನಿಧಿ ಪರ ಹಿರಿಯ ವಕೀಲ ವಿಲ್ಸನ್ ವಾದ ಮಂಡಿಸಿದ್ದು, ತಮ್ಮ ಕಕ್ಷಿದಾರರ ವಿರುದ್ಧ ದೇಶಾದ್ಯಂತ ಏಳು ಪ್ರಕರಣಗಳು ದಾಖಲಾಗಿದ್ದು, ಉದಯನಿಧಿ ಅವರು ಒಂದು ರಾಜ್ಯದ ಕ್ರೀಡಾ ಸಚಿವ. ಹೀಗಾಗಿ, ಅವರಿಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು. ಸುಪ್ರೀಂ ಕೋರ್ಟ್ನಿಂದ ಅವರಿಗೆ ವಿನಾಯಿತಿ ಸಿಕ್ಕಿದೆ. ಇನ್ನೂ ಅದೇಶದ ಪ್ರತಿ ಲಭ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು. ಮುಂದಿನ ವಿಚಾರಣೆ ಒಳಗಾಗಿ ಸುಪ್ರೀಂ ಕೋರ್ಟ್ ಆದೇಶ ಪ್ರತಿ ಸಲ್ಲಿಸುವಂತೆ ಉದಯನಿಧಿ ಪರ ವಕೀಲರಿಗೆ ನ್ಯಾಯಧೀಶರು ಸೂಚಿಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯನಿಧಿಗೆ 1 ಲಕ್ಷ ರೂ. ಬಾಂಡ್ ಶ್ಯೂರಿಟಿಯೊಂದಿಗೆ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.