More

    ಮಾದಕ ವಸ್ತು ಸೇವನೆ, ಅಕ್ರಮ ಸಾಗಾಣಿಕೆ ವಿರೋಧಿ ದಿನ ನಾಳೆ

    ವಿಜಯವಾಣಿ ಸುದ್ದಿಜಾಲ ಧಾರವಾಡ
    ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್​ ಇಲಾಖೆ, ಜಿಲ್ಲಾ ಕೇಂದ್ರ ಕಾರಾಗೃಹ, ಧಾರವಾಡ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ವಿಭಾಗ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ಸೇವನೆ ಹಾಗೂ ಅಕ್ರಮ ಸಾಗಾಣಿಕೆ ವಿರೋಧಿ ದಿನವನ್ನು ಜು. 3ರಂದು ಬೆಳಗ್ಗೆ 10.30ಕ್ಕೆ ಕರ್ನಾಟಕ ಆಲೂರು ವೆಂಕಟರಾವ್​ ಸಾಂಸ್ಕೃತಿಕ ಭವನದಲ್ಲಿ ಏರ್ಪಡಿಸಲಾಗಿದೆ.
    ಜಿಲ್ಲಾಧಿಕಾರಿ ದಿವ್ಯ ಪ್ರಭು ಕಾರ್ಯಕ್ರಮ ಉದ್ಘಾಟಿಸುವರು. ಅಥಿತಿಗಳಾಗಿ ಹಿರಿಯ ಸಿವಿಲ್​ ನ್ಯಾಯಧೀಶ ಪರಶುರಾಮ ದೊಡ್ಡಮನಿ, ಜಿಪಂ ಸಿಇಒ ಸ್ವರೂಪ ಟಿ.ಕೆ., ಪೊಲೀಸ್​ ಆಯುಕ್ತೆ ರೇಣುಕಾ ಸುಕುಮಾರ, ಎಸ್ಪಿ ಡಾ. ಗೋಪಾಲ ಬ್ಯಾಕೋಡ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಧಾರವಾಡ ಮಾನಸಿಕ ಹಾಗೂ ನರವಿಜ್ಞಾನ ಸಂಸ್ಥೆ ನಿರ್ದೇಶಕ ಡಾ. ಅರುಣಕುಮಾರ.ಸಿ., ಎಂ.ಎ. ಮರಿಗೌಡ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ ಆಗಮಿಸುವರು. ಮಾನಸಿಕ ಆರೋಗ್ಯ ವಿಭಾಗದ ಮನೋ ವೈದ್ಯ ಡಾ. ರಾವೇಂದ್ರ ಪಾಟೀಲ ವಿಶೇಷ ಉಪನ್ಯಾಸ ನೀಡುವರು ಎಂದು ಮಾನಸಿಕ ಆರೋಗ್ಯ ವಿಭಾಗದ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕಳಸೂರಮಠ.ಎಸ್​.ಬಿ. ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts