ನವದೆಹಲಿ: ಈಚೆಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದ್ದು, 09ನೇ ಆವೃತ್ತಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇನ್ನೂ ಟೀಮ್ ಇಂಡಿಯ ಆಪರ ಅಮೋಘ ಪ್ರದರ್ಶನ ನೀಡುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಹಾರ್ದಿಕ್ ಪಾಂಡ್ಯ ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಇದೀಗ ಮತ್ತೊಮ್ಮೆ ಸುದ್ದಿಯಲ್ಲಿರುವ ಹಾರ್ದಿಕ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸಿದ್ದಾರೆ.
ಇತ್ತೀಚಿಗೆ ಮುಕ್ತಾಯಗೊಂಡ ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಗೆದ್ದು ಬೀಗಿದ್ದು, 17 ವರ್ಷಗಳ ಬಳಕ ಕಪ್ಅನ್ನು ಗೆಲ್ಲಿಸಿಕೊಟ್ಟಿದ್ದಕ್ಕೆ ಆಟಗಾರರಿಗೆ ಬಿಸಿಸಿಐ ಭರ್ಜರಿ ಬಹುಮಾನ ಘೋಷಿಸಿತ್ತು. ಈ ಬಹುಮಾನದ ಮೊತ್ತವನ್ನು ಆಟಗಾರರು ಸ್ವದೇಶಕ್ಕೆ ಮರಳಿದ ಬಳಿಕ ನೀಡಲಾಗುತ್ತದೆ. ಇದೀಗ ಈ ಮೊತ್ತವನ್ನು ಹಾರ್ದಿಕ್ ತಮ್ಮ ತಾಯಿಯ ಅಕೌಂಟ್ಗೆ ಜಮೆ ಮಾಡುವಂತೆ ಹೇಳಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದು, ಸಖತ್ ಟ್ರೆಂಡ್ ಆಗುತ್ತಿದೆ.
ಇದನ್ನೂ ಓದಿ: ಹೆಂಡತಿ ಬಿಟ್ಟು ಅಪ್ರಾಪ್ತ ವಯಸ್ಕನ ಮೇಲೆ ಮೋಹಿತನಾದ ವ್ಯಕ್ತಿ; ಮುಂದೆ ನಡೆದಿದ್ದೇನು?
2023ರಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಗಾಯಗೊಂಡು ಆ ಬಳಿಕ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ನಾಯಕತ್ವದ ವಿಚಾರವಾಗಿ ತೀವ್ರವಾಗಿ ಟ್ರೋಲ್ ಆಗಿದ್ದ ಹಾರ್ದಿಕ್ ಪಾಂಡ್ಯ, ಆ ಬಳಿಕ ವಿಚ್ಛೇದನದ ವಿಚಾರವಾಗಿ ಸದ್ದು ಮಾಡಿದ್ದರು. ಹಾರ್ದಿಕ್ ಪತ್ನಿ ನತಾಶಾ ಪತಿಯ ಆಸ್ತಿಯಲ್ಲಿ ಶೇ.70 ರಷ್ಟು ಪಾಲನ್ನು ಜೀವನಾಂಶಕ್ಕೆ ನೀಡಬೇಕೆಂದು ಡಿವೋರ್ಸ್ ಅರ್ಜಿಯಲ್ಲಿ ಉಲ್ಲೇಖಿಸಿದ್ದರು. ಆದರೆ, ಆ ಬಳಿಕ ತಿಳಿದು ಬಂದ ವಿಚಾರವೇನೆಂದರೆ ಹಾರ್ದಿಕ್ ತಾವು ಖರೀದಿಸಿದ ಕಾರು, ಮನೆ ಹಾಗೂ ಬೆಲೆಬಾಳುವ ವಸ್ತುಗಳನ್ನ ತಮ್ಮ ತಾಯಿಯ ಹೆಸರಿನಲ್ಲಿ ನೋಂದಾಯಿಸಿದ್ದರೆಂದು. ನತಾಶಾಗೆ 70 ಅಲ್ಲಾ ಶೇ. 07ರಷ್ಟು ಪಾಲು ಸಿಗುವುದಿಲ್ಲವೆಂದು. ಇದೀಗ ಈ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗುತ್ತಿದೆ.
ಬಿಸಿಸಿಐ ತಮಗೆ ಕೊಡುವ ಮೊತ್ತವನ್ನು ತಮ್ಮ ತಾಯಿಯ ಖಾತೆಗೆ ಹಾಕಬೇಕೆಂದು ಹಾರ್ದಿಕ್ ಬಿಸಿಸಿಐ ಕಾರ್ಯದರ್ಶಿ ಜಯ್ ಷಾ ಅವರ ಬಳಿ ಮನವಿ ಮಾಡಿಕದ್ದಾರಂತೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಆಗುತ್ತಿದ್ದು, ಇದರ ಮೀಮ್ಸ್ ಸಖತ್ ವೈರಲ್ ಆಗುತ್ತಿದೆ. ಇದರ ಬಗ್ಗೆ ಹಾರ್ದಿಕ್ ಮುಂದಿನ ದಿನಗಳಲ್ಲಿ ಹೇಗೆ ಪ್ರತಿಕ್ರಿಯಿಸಲಿದ್ದಾರೆ ಎಂದು ಕಾದು ನೋಡಬೇಕಿದೆ.