ಅಳವಂಡಿ: ಕಾಯಿಲೆ ಚಿಕ್ಕದಿರುವಾಗಲೇ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯವಂತರಾಗಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕ ಪ್ರಕಾಶ್ ರಾವ್ ಹೇಳಿದರು.
ಇದನ್ನೂ ಓದಿ: ಟೀ ಮಾಡುವಾಗ ಅಪ್ಪಿತಪ್ಪಿ ಈ ತಪ್ಪನ್ನು ಮಾಡ್ಬೇಡಿ… ಮಾಡಿದ್ರೆ ಆರೋಗ್ಯಕ್ಕೆ ತಂಬಾ ಡೇಂಜರ್!
ಸಮೀಪದ ಕಾತರಕಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.
ಎಲ್ಲ ಸಂಪತ್ತಿಗಿಂತಲೂ ಆರೋಗ್ಯ ಸಂಪತ್ತು ಮುಖ್ಯ. ಕಾಯಿಲೆ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಕಾಯಿಲೆ ಬರದಂತೆ ನೋಡಿಕೊಳ್ಳುವುದು ಸೂಕ್ತ. ಮಹಿಳೆಯರು ಆರೋಗ್ಯ ದೃಷ್ಟಿಯಿಂದ ವಹಿಸಬೇಕಾದ ಎಚ್ಚರಿಕೆ ಹಾಗೂ ದೈನಂದಿನ ಆಹಾರ ಸೇವನೆಯಲ್ಲಿ ಪೌಷ್ಟಿಕ ಆಹಾರ ಸೇವಿಸುವ ಬಗ್ಗೆ ಮಾಹಿತಿ ನೀಡಿದರು.
ಕ್ಷೇತ್ರ ಯೋಜನಾಧಿಕಾರಿ ಜಗದೀಶ ಮಾತನಾಡಿದರು. ಗ್ರಾ.ಪಂ ಸದಸ್ಯೆ ಶಾಂತಾ, ಸೆಕ್ಯೂರ್ ಆಸ್ಪತ್ರೆ ವೈದ್ಯಾಧಿಕಾರಿ ಪ್ರವೀಣ ಅರಕೇರಿ, ಸುರಕ್ಷಾ ಆಸ್ಪತ್ರೆ ವೈದ್ಯಾಧಿಕಾರಿ ಚೇತನ್.ಡಿ, ವಲಯ ಮೇಲ್ವಿಚಾರಕ ವಿಶ್ವನಾಥ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಗೀತಾ ಇದ್ದರು.